ಆನೆ ಬಂದರೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬರುವುದಿಲ್ಲ….!

June 26, 2019
9:00 AM

ಸುಳ್ಯ:ಮಂಡೆಕೋಲಿನಲ್ಲಿ ಹಲವು ದಿನಗಳಿಂದ ಕಾಡಾನೆಗಳ ಹಿಂಡು ಬೀಡುಬಿಟ್ಟು ದಾಳಿ ನಡೆಸಿದರೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿಲ್ಲ ಮತ್ತು ಆನೆಗಳನ್ನು ಓಡಿಸಲು ಇಲಾಖೆ ಪಟಾಕಿಯನ್ನೂ ಒದಗಿಸಿಲ್ಲ ಎಂಬ ದೂರುಗಳು ಬಂದಿದೆ….! ಹೀಗೆಂದು ಅರಣ್ಯ ಇಲಾಖಾ ಸಿಬಂದಿಗಳನ್ನು ಪ್ರಶ್ನಿಸಿದ್ದು ತಾ ಪಂ ಅಧ್ಯಕ್ಷ ಚನಿಯ ಕಲ್ತಡ್ಕ.

Advertisement

ತಾ.ಪಂ.ಅಧ್ಯಕ್ಷ ಚನಿಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಆನೆಯ ವಿಷಯ ಚರ್ಚೆಯಾಯಿತು.  ಆನೆ ಬಂದರೂ ಬಾರದೇ ಇರುವುದು ಮಾತ್ರವಲ್ಲ ಜನಪ್ರತಿನಿಧಿಗಳಲ್ಲಿ  ಈ ಬಗ್ಗೆ ದೂರು ಹೇಳಿದ್ದು ಯಾಕೆ ಎಂದು ಅರಣ್ಯ ಸಿಬ್ಬಂದಿಗಳು ಸ್ಥಳೀಯರ ಮೇಲೆ ಸವಾರಿ ಮಾಡಿರುವ ಬಗ್ಗೆ ದೂರುಗಳಿವೆ. ಇದು ಯಾಕೆ, ಈ ರೀತಿ ವರ್ತಿಸಿದ ಸಿಬ್ಬಂದಿಯ ಮೇಲೆ ಕ್ರಮ ಜರುಗಿಸಿ ಎಂದು ಅಧ್ಯಕ್ಷರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಹೇಳಿದರು. ಈ ಕುರಿತು ಸಿಬ್ಬಂದಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡುವುದಾಗಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.

ಮಂಡೆಕೋಲು, ದೇಲಂಪಾಡಿಯಲ್ಲಿ ಸಭೆ:
ಗಡಿಪ್ರದೇಶದಲ್ಲಿ ಉಂಟಾಗಿರುವ ಆನೆ ಹಾವಳಿಯ ಕುರಿತು ಕೇರಳ ಮತ್ತು ಕರ್ನಾಟಕದ ಅಧಿಕಾರಿಗಳ ಜಂಟಿ ಸಭೆ ಮಂಗಳೂರಿನಲ್ಲಿ ನಡೆದಿತ್ತು. ಮುಂದಿನ ಹಂತದಲ್ಲಿ ಮಂಡೆಕೋಲು ಮತ್ತು ದೇಲಂಪಾಡಿಯಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ತಿಳಿಸಿದರು. ಸಭೆ ನಡೆಸಿ ಸ್ಥಳೀಯ ಜನರ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅದನ್ನು ಕ್ರೂಡೀಕರಿಸಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಅವರು ವಿವರಿಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group