ಸುಳ್ಯ: ಆರಾಮವಾಗಿದ್ದೇವೆ. ಏನೂ ಸಮಸ್ಯೆ ಆಗಿಲ್ಲ ಎಂದು ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತರುವ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಹೇಳಿದ್ದಾರೆ.
ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಮಾಡಿದ ಅವರು, ಖಾಸಗೀ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹೆಚ್ಚಿನ ಸಮಸ್ಯೆ ಆಗಿಲ್ಲ. ಈಗ ಆರಾಮವಾಗಿರುವುದಾಗಿ ಹೇಳಿದರು. ರಾಮದಾಸ್ ಮತ್ತು ಅವರ ಸಹೋದರ ಶ್ರೀಕಾಂತ್ ಖಾಸಗೀ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದಾಗ
ಅವರ ಕಾರು ಇಂದು ಬೆಳಿಗ್ಗೆ ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ರಾಮದಾಸ್ ಮತ್ತು ಚಾಲಕ ಅಲ್ಪಸ್ವಲ್ಪ ಗಾಯಗೊಂಡಿದ್ದರು. ಅವರಿಗೆ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel