ಆರ್.ಸಿ.ಇ.ಪಿ. ಒಪ್ಪಂದದಿಂದ ಭಾರತ ದೂರ : ಕ್ಯಾಂಪ್ಕೊ ಅಭಿನಂದನೆ

November 5, 2019
6:04 PM

ಮಂಗಳೂರು: ಭಾರತದ ಕೃಷಿ ವಲಯಕ್ಕೆ ಹೊಡೆತ ನೀಡಬಹುದಾಗಿದ್ದ ಬಹುಚರ್ಚಿತ ಆರ್.ಸಿ.ಇ.ಪಿ. ಒಪ್ಪಂದದಿಂದ ಭಾರತವು ಹೊರಗುಳಿದಿದ್ದು, ಕೇಂದ್ರ ಸರಕಾರವು ಮತ್ತೊಮ್ಮೆ ಕೃಷಿಕರ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಯಾಂಪ್ಕೊ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

ಭಾರತದ ಅಡಿಕೆ ಮತ್ತು ಕಾಳುಮೆಣಸು ಉತ್ಪಾದಕ ವಲಯದ ಪರವಾಗಿ ಪ್ರಧಾನಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಮತ್ತು ಕೇಂದ್ರ ಹಣಕಾಸು ಸಚಿವರುಗಳನ್ನು ಭೇಟಿ ಮಾಡಿ ಅಡಿಕೆ ಮತ್ತು ಕಾಳುಮೆಣಸನ್ನು ಆರ್.ಸಿ.ಇ.ಪಿ. ಒಪ್ಪಂದದಿಂದ ಹೊರತುಪಡಿಸುವಂತೆ ಕ್ಯಾಂಪ್ಕೊ ವಿನಂತಿಸಿತ್ತು. ದೇಶವು ಅಡಿಕೆ ಮತ್ತು ಕಾಳುಮೆಣಸು ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ.ಈಗಾಗಲೇ ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಮತ್ತು ಕಾಳುಮೆಣಸು ದೇಶದೊಳಕ್ಕೆ ಆಮದಾಗಿದ್ದು, ದೇಶೀಯ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದಲ್ಲದೆ ಕೃಷಿ ಆರ್ಥಿಕತೆಗೆ ಅಪಾಯವನ್ನುಂಟುಮಾಡಿದೆ. ಇಂತಹ ಸಂದರ್ಭದಲ್ಲಿ ಗೊಂದಲ ಮತ್ತು ಭೀತಿಯುಂಟುಮಾಡಿದ ಒಪ್ಪಂದದಿಂದ ದೇಶವನ್ನು ಹೊರತುಪಡಿಸಿ ಕೃಷಿಕರ ಬೆಂಬಲಕ್ಕೆ ನಿಂತಿದ್ದು ಸರಕಾರದ ಕೃಷಿಸ್ನೇಹಿ ನೀತಿಯನ್ನು ಎತ್ತಿತೋರಿಸುತ್ತದೆ ಎಂದು ಪ್ರಕಟಣೆಯಲ್ಲಿ  ಕ್ಯಾಂಪ್ಕೋ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror