ಆರ್ ಸಿ ಇ ಪಿ ಬಗ್ಗೆ ಆತಂಕ ಬೇಡ- ಸಂಸದ ನಳಿನ್ ಕುಮಾರ್ ಕಟೀಲ್

November 1, 2019
8:34 PM

ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್‍ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್‍ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್‍ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್‍ಗಳ ಜೊತೆ ಮಾತುಕತೆ ನಡೆಸಿದೆ. ಆರ್‍ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror