ಸುಳ್ಯ: ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಬಿಜೆಪಿ-ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್, ರೈತ ಸಂಘ ಬೆಂಬಲಿತ ಅಭ್ಯರ್ಥಿಗಳಿಗೆ ಹಾಗೂ ಪಕ್ಷೇತರ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಬಿ.ಜೆ.ಪಿ.ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಜಯಪ್ರಕಾಶ್ ಕುಂಚಡ್ಕ, ಶ್ರೀಪತಿ ಭಟ್ ಮಜಿಗುಂಡಿ, ಸುಧಾಕರ ಆಲೆಟ್ಟಿ, ಹರೀಶ್ ಕೆ.ಜೆ, ಗಂಗಾಧರ ಎನ್.ಎ., ಹಾಗೂ ಪ.ಪಂಗಡ ಕ್ಷೇತ್ರದ ಅಭ್ಯರ್ಥಿ ಶಿವರಾಮ ಕಾಪುಮಲೆ , ಮಹಿಳಾ ಕ್ಷೇತ್ರದಲ್ಲಿ ವೇದಾವತಿ , ಶ್ರೀದೇವಿ ಭಟ್ ಮಜಿಗುಂಡಿ, ಹಿಂದುಳಿದ ವರ್ಗಗಳ ಕ್ಷೇತ್ರದಲ್ಲಿ ಕರುಣಾಕರ ಹಾಸ್ಪಾರೆ ಗೆಲುವು ಕಂಡರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel