ಆಲೆಟ್ಟಿ ಸಹಕಾರಿ ಸಂಘದ ಎದುರಿನಲ್ಲಿ ರೈತ ಸಂಘದ ವತಿಯಿಂದ ಪ್ರತಿಭಟನೆ

October 16, 2019
3:19 PM

ಸುಳ್ಯ:ಹಿಂದಿನ ಸಮ್ಮಿಶ್ರ ಸರಕಾರ ಮಾಡಿದ್ದ ಸಾಲ ಮನ್ನಾ ಮೊತ್ತವು  ರೈತರ ಖಾತೆಗೆ ಜಮೆ ಆಗದೇ ಇರುವುದನ್ನು ಪ್ರತಿಭಟಿಸಿ ರೈತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಆಲೆಟ್ಟಿ ಸಹಕಾರಿ ಸಂಘದ ಎದುರಿನಲ್ಲಿ ಅ.16 ರಂದು ಪ್ರತಿಭಟನೆ ನಡೆಸಲಾಯಿತು.

Advertisement
Advertisement
Advertisement
Advertisement

ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ , 15 ದಿನಗಳ ಒಳಗಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು‌. ಈಗಿನ ರಾಜ್ಯ ಸರಕಾರ ಸಾಲ ಮನ್ನಾ ಮಾಡುವುದು ಬಿಡಿ ಹಿಂದಿನ ಸರಕಾರಗಳು ನೀಡಿದ ಹಣವನ್ನು ತಲುಪಿಸುವ ಪ್ರಯತ್ನವನ್ನಾದರೂ ಮಾಡಲೀ. ಸರಕಾರಕ್ಕೆ, ಸಹಕಾರಿ ಸಂಘಗಳಿಗೆ ರೈತರ ಬಗ್ಗೆ ಕಾಳಜಿಯಿದ್ದರೆ ರೈತರ ಖಾತೆಗೆ ಹಣ ತುಂಬುವ ಪ್ರಯತ್ನವನ್ನು ಮಾಡುತ್ತೇವೆಂದು ರೈತರ ಮುಂದೆ ಪ್ರಮಾಣವನ್ನು ಮಾಡಲಿ ಎಂದು ಸವಾಲೆಸದರು. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಆಗಿರುವ ಪಾವತಿಯ ಮಾಹಿತಿಯನ್ನು ನೀಡತಕ್ಕದ್ದು, ಇಲ್ಲದಿದ್ದಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ಮಾಡಲು ಹಿಂದೇಟು ಹಾಕುವುದಿಲ್ಲವೆಂದು ಎಚ್ಚರಿಸಿದರು.

Advertisement

ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ
ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ
January 31, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror