ಸುಳ್ಯದಲ್ಲಿ ಮಿತಿಮೀರಿದ “ಭ್ರಷ್ಟಾಚಾರ”…. ಇದೇನ್ ಸಾರ್ ಹೀಂಗೆ ಹಣ ತೆಗೀತೀರಾ…! ,

June 8, 2019
9:55 AM

ಸುಳ್ಯ: ಸುಳ್ಯದ ಪ್ರಮುಖ ಕಚೇರಿಯೊಂದರಲ್ಲಿ  ಭ್ರಷ್ಟಾಚಾರ ಮಿತಿಮೀರಿದೆ ಎಂಬ ಆರೋಪ ಕಳೆದ ಹಲವಾರು ಸಮಯಗಳಿಂದ ಕೇಳಿಬರುತ್ತಿತ್ತು. ಪ್ರತಿಯೊಂದಕ್ಕೂ ಲಂಚಾವತಾರ ಹೆಚ್ಚಾಗಿದೆ ಎಂದು ದೂರು ಇತ್ತು. ಅದಕ್ಕೆ ಪೂರಕವಾಗಿ ವಿಡಿಯೋವೊಂದು “ಸುಳ್ಯನ್ಯೂಸ್.ಕಾಂ” ಗೆ ಲಭಿಸಿದೆ.

Advertisement
Advertisement

ಸುಳ್ಯದ ಉಪನೋಂದಣಿ ಕಚೇರಿಯಲ್ಲಿ  ಅಧಿಕಾರಿಯೊಬ್ಬರು ಹಣ ಪಡೆಯುತ್ತಿರುವುದು  ಹಾಗೂ ಹಣಕ್ಕಾಗಿ  ಚರ್ಚೆ ಮಾಡುತ್ತಿರುವ ದೃಶ್ಯ  ವಿಡಿಯೋದಲ್ಲಿದೆ . ಈಗ ಎಲ್ಲವೂ ಆನ್ ಲೈನ್ ಮೂಲಕ ಪಾವತಿಯಾಗುತ್ತಿರುವ ಸಂದರ್ಭ ಇಷ್ಟೊಂದು ಹಣ ಪಡೆಯುತ್ತಿರುವುದು ಏಕೆ ಎಂಬ ಪ್ರಶ್ನೆ ಒಂದು ಕಡೆಯಾದರೆ, ಕಚೇರಿಯಲ್ಲಿ  ಹೀಗೆಲ್ಲಾ ಹಣ ಪಡೆಯುವುದು ಯಾವುದೇ ಅಧಿಕಾರಿಗಳ ಗಮನಕ್ಕೂ ಬಾರದೇ ಇರುವುದು  ಸೋಜಿಗ ಎನಿಸಿದೆ.  ಹೀಗಾಗಿ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಇದರ ವಿರುದ್ಧ ಹೋರಾಟ ನಡೆಸಲೇಬೇಕಾದ ಅನಿವಾರ್ಯತೆ ಇದೆ. ಕೆಲವೊಮ್ಮೆ ಜನರೇ ತಮ್ಮ ಕೆಲಸಗಳಿಗಾಗಿ ಹಣ ನೀಡುತ್ತಾರೆ. ಆದರೆ ಇದು ಅದಲ್ಲ, ಒತ್ತಾಯ ಪೂರ್ವಕವಾಗಿ ಚರ್ಚೆ ಮಾಡಿ ಹಣ ಪಡೆಯುವುದು  ಈ ವಿಡಿಯೋದಲ್ಲಿ  ತಿಳಿಯುತ್ತದೆ. ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ…!

 

ಈ ನಡುವೆ ವಿಡಿಯೋದಲ್ಲಿ ಕೇಳಿಸುವಂತೆ ಹಾಗೂ ಹಣ ತೆಗೆಯುವ ಸಂದರ್ಭ ನಮಗೆ ಬೇರೆದಕ್ಕೂ ಕೊಡಲಿದೆ ಎಂದು ಹೇಳುವುದು  ಕೇಳಿಸುತ್ತದೆ. ಇದು ಕೂಡಾ ಚರ್ಚೆಗೆ ಕಾರಣವಾಗಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸುಳ್ಯದ ಆಡಳಿತ ಪಕ್ಷಗಳು, ಶಾಸಕರು , ಸರಕಾರ, ವಿಪಕ್ಷಗಳು ಸುಮ್ಮನೆ ಕುಳಿತಿರುವುದೇಕೆ ಎಂಬುದೇ ಪ್ರಶ್ನೆಯಾಗಿದೆ.

 

Advertisement

 

 

 

Advertisement

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
Jack Fruit
ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!
June 19, 2025
8:20 PM
by: ದ ರೂರಲ್ ಮಿರರ್.ಕಾಂ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |
June 14, 2025
5:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group