ಸುಳ್ಯದಲ್ಲಿ ಮಿತಿಮೀರಿದ “ಭ್ರಷ್ಟಾಚಾರ”…. ಇದೇನ್ ಸಾರ್ ಹೀಂಗೆ ಹಣ ತೆಗೀತೀರಾ…! ,

June 8, 2019
9:55 AM

ಸುಳ್ಯ: ಸುಳ್ಯದ ಪ್ರಮುಖ ಕಚೇರಿಯೊಂದರಲ್ಲಿ  ಭ್ರಷ್ಟಾಚಾರ ಮಿತಿಮೀರಿದೆ ಎಂಬ ಆರೋಪ ಕಳೆದ ಹಲವಾರು ಸಮಯಗಳಿಂದ ಕೇಳಿಬರುತ್ತಿತ್ತು. ಪ್ರತಿಯೊಂದಕ್ಕೂ ಲಂಚಾವತಾರ ಹೆಚ್ಚಾಗಿದೆ ಎಂದು ದೂರು ಇತ್ತು. ಅದಕ್ಕೆ ಪೂರಕವಾಗಿ ವಿಡಿಯೋವೊಂದು “ಸುಳ್ಯನ್ಯೂಸ್.ಕಾಂ” ಗೆ ಲಭಿಸಿದೆ.

ಸುಳ್ಯದ ಉಪನೋಂದಣಿ ಕಚೇರಿಯಲ್ಲಿ  ಅಧಿಕಾರಿಯೊಬ್ಬರು ಹಣ ಪಡೆಯುತ್ತಿರುವುದು  ಹಾಗೂ ಹಣಕ್ಕಾಗಿ  ಚರ್ಚೆ ಮಾಡುತ್ತಿರುವ ದೃಶ್ಯ  ವಿಡಿಯೋದಲ್ಲಿದೆ . ಈಗ ಎಲ್ಲವೂ ಆನ್ ಲೈನ್ ಮೂಲಕ ಪಾವತಿಯಾಗುತ್ತಿರುವ ಸಂದರ್ಭ ಇಷ್ಟೊಂದು ಹಣ ಪಡೆಯುತ್ತಿರುವುದು ಏಕೆ ಎಂಬ ಪ್ರಶ್ನೆ ಒಂದು ಕಡೆಯಾದರೆ, ಕಚೇರಿಯಲ್ಲಿ  ಹೀಗೆಲ್ಲಾ ಹಣ ಪಡೆಯುವುದು ಯಾವುದೇ ಅಧಿಕಾರಿಗಳ ಗಮನಕ್ಕೂ ಬಾರದೇ ಇರುವುದು  ಸೋಜಿಗ ಎನಿಸಿದೆ.  ಹೀಗಾಗಿ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಇದರ ವಿರುದ್ಧ ಹೋರಾಟ ನಡೆಸಲೇಬೇಕಾದ ಅನಿವಾರ್ಯತೆ ಇದೆ. ಕೆಲವೊಮ್ಮೆ ಜನರೇ ತಮ್ಮ ಕೆಲಸಗಳಿಗಾಗಿ ಹಣ ನೀಡುತ್ತಾರೆ. ಆದರೆ ಇದು ಅದಲ್ಲ, ಒತ್ತಾಯ ಪೂರ್ವಕವಾಗಿ ಚರ್ಚೆ ಮಾಡಿ ಹಣ ಪಡೆಯುವುದು  ಈ ವಿಡಿಯೋದಲ್ಲಿ  ತಿಳಿಯುತ್ತದೆ. ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ…!

 

ಈ ನಡುವೆ ವಿಡಿಯೋದಲ್ಲಿ ಕೇಳಿಸುವಂತೆ ಹಾಗೂ ಹಣ ತೆಗೆಯುವ ಸಂದರ್ಭ ನಮಗೆ ಬೇರೆದಕ್ಕೂ ಕೊಡಲಿದೆ ಎಂದು ಹೇಳುವುದು  ಕೇಳಿಸುತ್ತದೆ. ಇದು ಕೂಡಾ ಚರ್ಚೆಗೆ ಕಾರಣವಾಗಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸುಳ್ಯದ ಆಡಳಿತ ಪಕ್ಷಗಳು, ಶಾಸಕರು , ಸರಕಾರ, ವಿಪಕ್ಷಗಳು ಸುಮ್ಮನೆ ಕುಳಿತಿರುವುದೇಕೆ ಎಂಬುದೇ ಪ್ರಶ್ನೆಯಾಗಿದೆ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ
July 19, 2026
8:42 PM
by: ದ ರೂರಲ್ ಮಿರರ್.ಕಾಂ
ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror