ಇನ್ನೊಂದು ಚಂಡಮಾರುತದ ಸುಳಿವು ನೀಡಿದ ಕಡಲು

November 4, 2019
12:06 PM

ಮಂಗಳೂರು: ಎರಡು ಚಂಡಮಾರುತ ದಾಟಿ ಹೋಯಿತು. ಇದೀಗ ಇನ್ನೊಂದು ಚಂಡಮಾರುತ ಏಳುವ ಸೂಚನೆ ಇದೆ. ಕ್ಯಾರ್ ಬಳಿಕ ಮಹಾ ಚಂಡಮಾರುತ ಜೊತೆ ಜೊತೆಯಾಗಿಯೇ ಬಂದರೂ ಎಲ್ಲೂ ಭಾರೀ ಅಪಾಯವಾಗದೆ ದೂರವಾಗಿದೆ. ಈಗ ಮಹಾ ಚಂಡಮಾರುತವು ಗುಜರಾತ್ ಪ್ರದೇಶದಲ್ಲಿ  ಕಂಡುಬಂದರೆ ಕ್ಯಾರ್ ದುರ್ಬಲವಾಗುತ್ತಾ ಒಮನ್ ಪ್ರದೇಶದಲ್ಲಿ  ಹಾದು ಹೋಗಿದೆ.ಈಗ ಹಿಂದು ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ  ಸಾಧ್ಯತೆ ಇದೆ. ಈ ಹಿಂದೆಯೇ ಈ ಬಗ್ಗೆ ಹವಾಮಾನ ವರದಿಗಳು ಹೇಳಿದ್ದವು.

Advertisement

ಅರಬ್ಬೀ ಸಮುದ್ರದಲ್ಲಿ ಎರಡು ಚಂಡಮಾರುತಗಳು ಒಮ್ಮೆಲೇ ಕಾಣಿಸಿಕೊಂಡ  ಅಪರೂಪದ ಘಟನೆಗೆ ದೇಶ ಸಾಕ್ಷಿಯಾಯಿತು. ಕ್ಯಾರ್ ಹಾಗೂ ಮಹಾ ಚಂಡಮಾರುತ ಇದು.  54 ವರ್ಷಗಳ ಹಿಂದೆ ಅಂದರೆ 1965 ರಲ್ಲಿ ಇಂತಹ ವಿದ್ಯಮಾನ ಜರುಗಿತ್ತು.

‘ಮಹಾ’ ಗುಜರಾತ್‌ ಕಡೆಗೆ: ‘ಮಹಾ’ ಚಂಡಮಾರುತ ಗುಜರಾತ್‌ ಹಾಗೂ ಮಹಾರಾಷ್ಟ್ರ ಕಡೆಗೆ ಚಲಿಸಿದೆ. ಇದರಿಂದ ಆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಸೋಮವಾರ ಮಡಿಕೇರಿ, ಕಾಸರಗೋಡು, ಕಾರ್ಕಳ, ಹೊರನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬಂದಿದೆ.

 

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group