ಸುಳ್ಯ: ದ.ಕ.ಜಿಲ್ಲಾ ಪಂಚಯತ್ ಕೃಷಿ ಇಲಾಖೆ ವತಿಯಿಂದ ಕೃಷಿ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಮಾಹಿತಿಯನ್ನು ಕೃಷಿಕರಿಗೆ ತಿಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಆರಂಭಗೊಂಡಿದೆ.
ಸುಳ್ಯ ಹೋಬಳಿಯ ಅಭಿಯಾನಕ್ಕೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷ ತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಪಾಲಿಚಂದ್ರ ಸ್ವಾಗತಿಸಿ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ವಂದಿಸಿದರು. ವೀರಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು.
Advertisement
ಸುಳ್ಯ ಹೋಬಳಿಯ ಕೃಷಿ ಅಭಿಯನವು 26 ರವರೆಗೆ ನಡೆಯಲಿದೆ.
Advertisement

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

