ಇವತ್ತು ನಮಗೆ ಮಳೆಯುಂಟೋ ಇಲ್ವೋ….? ಏನು ಹೇಳುತ್ತದೆ ವೆದರ್ ರಿಪೋರ್ಟ್…?

April 29, 2020
4:22 PM

ಮಂಗಳೂರು: ವೆದರ್ ರಿಪೋರ್ಟ್ ಪ್ರಕಾರ ಇನ್ನು 3 ದಿನಗಳ ಕಾಲ ರಾಜ್ಯದ ವಿವಿದೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಕಾಸರಗೋಡು, ಬದಿಯಡ್ಕ, ಮುಳ್ಳೇರಿಯ, ಉಡುಪಿ ಹಾಗೂ ದ. ಕ. ಜಿಲ್ಲೆಯಾದ್ಯಂತ ಮೋಡದ ವಾತಾವರಣ ಇರಬಹುದು. ಸಾಗರ ಹಾಗೂ ಹೊಸನಗರ ಭಾಗಗಳಲ್ಲೂ ಸಾಧಾರಣ ಮಳೆ ಸಾಧ್ಯತೆ ಇದೆ.

Advertisement

ಹವಾಮಾನ ಇಲಾಖೆಯ ಉಪಗ್ರಹ ಚಿತ್ರ  ಆಧರಿಸಿ ದಕ್ಷಿಣ ಕನ್ನಡ ಜಿಲ್ಲೆಯ ವೆದರ್ ಬಗ್ಗೆ ಮಾಹಿತಿ ನೀಡಿದ ಕೃಷಿಕ ಸಾಯಿಶೇಖರ್ ಹೀಗೆ ಹೇಳಿದ್ದಾರೆ..

Audio Player

 

ಇದರ ಜೊತೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇದೆ. ಇನ್ನು 2 ಅಥವಾ 3 ದಿವಸಗಳಲ್ಲಿ ಸರಿಯಾದ ಚಿತ್ರಣ ಸಿಗಬಹುದು.ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಂಡೋಮಾನ್, ನಿಕೋಬರ್ ನಲ್ಲಿ ವಾಯುಭಾರ ಕುಸಿತ ಉಂಟಾಗಿದೆ.

ಬೆಂಗಳೂರಿನಲ್ಲಿ  ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ ಧಾರಾಕಾರ ಮಳೆ ಸುರಿದಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಜಿಲ್ಲೆಗಳಲ್ಲಿ ಕೂಡಾ ಮಳೆಯಾದ ವರದಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದೆ. ಜಿಲ್ಲೆಯ ಕೆಲವೆಡೆ ನಿನ್ನೆ ಸಂಜೆ ವೇಳೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ ಸುರಿದಿದ್ದು, ಸಿಡಿಲಿಗೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ
ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group