ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

February 14, 2020
7:40 PM

ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿಯ ಕ್ಷೇತ್ರಗಳು: ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್, ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್. ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ ಇರಬೇಕು.
ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ಅರ್ಜಿದಾರರು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯು ಫುಡ್ ಕ್ರಾಫ್ಟ್ ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ, ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror