ಉತ್ತಮ ಮಾತುಗಾರಿಗೆ ಜಗತ್ತನ್ನು ಗೆಲ್ಲುವ ಶಕ್ತಿ ಇದೆ

July 16, 2019
12:00 PM

ಬೆಳ್ಳಾರೆ : ಆಧುನಿಕ ಜಗತ್ತಿನಲ್ಲಿ ಒಳ್ಳೆಯ ಮಾತುಗಾರರಿಗೆ ತುಂಬಾ ಬೇಡಿಕೆ ಇದೆ. ಅತ್ಯುತ್ತಮವಾಗಿ ಮಾತನಾಡಬಲ್ಲವ ಜಗತ್ತನ್ನೇ ಗೆಲ್ಲಬಲ್ಲ ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.

Advertisement

ಅವರು ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ನಡೆದ ಎರಡು ದಿನಗಳ ಮಾತುಗಾರಿಕಾ ಕಮ್ಮಟದ ಮುಖ್ಯ ತರಬೇತುದಾರರಾಗಿ ಭಾಗವಹಿಸಿ ತರಬೇತಿ ನೀಡಿದರು. ಉತ್ತಮವಾಗಿ ಮಾತನಾಡುವುದು ಒಂದು ಕಲೆ. ವಿಷಯಾಧಾರಿತವಾಗಿ ನಿರರ್ಗಗಳವಾಗಿ ಮಾತಾಡುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ರಾಜೇಂದ್ರ ಭಟ್ ಕರೆ ನೀಡಿದರು.

ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ, ಉದ್ಯಮಿ ಮಿಥುನ್ ಶೆಣೈ ತರಬೇತಿ ಮಾತುಗಾರಿಕಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿ, ಯುವಕರಿಗೆ ವ್ಯಕ್ತಿತ್ವ ವಿಕಸನದ ತರಬೇತಿಗಳನ್ನು ನೀಡುವ ಮೂಲಕ ಜೇಸೀ ಸಂಸ್ಥೆ ಸಮಾಜಕ್ಕೆ ಪ್ರಬುದ್ಧ ನಾಯಕರನ್ನು ನೀಡುವ ಶಕ್ತಿ ಹೊಂದಿದೆ ಎಂದರು.

ರಾಷ್ಟ್ರೀಯ ತರಬೇತಿದಾರ ರಾಜೇಂದ್ರ ಭಟ್ ಹಾಗೂ ಜೇಸಿಐ ವಲಯ ತರಬೇತುದಾರ ದಿನೇಶ್ ಕಾರ್ಕಳ ಎರಡು ದಿನಗಳ ಕಾಲ ವಿವಿಧ ವಿಷಯಗಳಲ್ಲಿ ಮಾತುಗಾರಿಕಾ ಕಮ್ಮಟ ನಡೆಸಿಕೊಟ್ಟರು.

ಬೆಳ್ಳಾರೆ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವಾಧ್ಯಕ್ಷ ಜಯರಾಮ ಉಮಿಕ್ಕಳ, ಯುವಜೇಸೀ ಅಧ್ಯಕ್ಷ ಸಾಗರ್, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರವೀಣ್ ವಂದಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?
July 6, 2025
5:10 PM
by: ಸಾಯಿಶೇಖರ್ ಕರಿಕಳ
2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group