ಕಡಬ: ಉಪ್ಪಿನಂಗಡಿಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡರ ಪುತ್ರ ದಯೇಶ್ ಮೃತಪಟ್ಟಿದ್ದಾರೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕಡಬ ಕಡೆಗೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಉಪ್ಪಿನಂಗಡಿಯ ಸಿಟಿಲ್ಯಾಂಡ್ ಹೊಟೇಲ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel