ಎ.22 : ಶ್ರೀ ಗುರು ರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ

April 15, 2019
11:14 AM

ಸುಳ್ಯ: ಇಲ್ಲಿನ ಶ್ರೀ ಗುರು ರಾಘವೇಂದ್ರ ಮಠದ ಪ್ರಥಮ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಎ.22 ರಂದು ವೇದಮೂರ್ತಿ ಹರಿ ಎಳಚಿತ್ತಾಯ ನೇತೃತ್ವದಲ್ಲಿ ನಡೆಯಲಿದೆ ಎಂದು ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.00 ರಿಂದ ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಮಂತ್ರ ಹೋಮ, ಮಧ್ಯಾಹ್ನ ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5.00 ಗಂಟೆಗೆ ಆಶ್ಲೇಷಾ ಬಲಿ ಪೂಜೆ, ರಂಗಪೂಜೆ ನೆರವೆರಲಿರುವುದು. ಬಳಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಭಜನೆ ಕಾರ್ಯಕ್ರಮ, ಕುಂಟಾರು ವಾಸುದೇವ ತಂತ್ರಿ ಮತ್ತು ಬಳಗದವರಿಂದ ಭಕ್ತಿಗಾನ ಹಾಗೂ ರಾತ್ರಿ ಧಾರ್ಮಿಕ ಸಭೆ ನಡೆಯಲಿದೆ. ಡಾ. ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿಲಿದ್ದಾರೆ. ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಉಪ್ಪಳ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಡಾ.ಕಿರಣ್ ಕುಮಾರ್, ಕೃಷ್ಣ ಕಾಮತ್ ಅರಂಬೂರು, ಶ್ರೀಕೃಷ್ಣ ಸೋಮಯಾಗಿ, ಶ್ರೀಧರ ಭಾಗವತ ಹರಿಹರ, ಸುಂದರ ಸರಳಾಯ, ಸುಮಾ ಸುಬ್ಬರಾವ್ ಉಪಸ್ಥಿತರಿರಲಿದ್ದಾರೆ. ಬಳಿಕ ಶಿಕ್ಷಕರ ಯಕ್ಷಗಾನ ಒಕ್ಕೂಟದವರಿಂದ ರತಿ ಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಪತ್ರಿಕಾಗೋಷ್ಟಿಯಲ್ಲಿ ಮಠ ನಿರ್ಮಾಣ ಸಮಿತಿ ಕಾರ್ಯಾಧ್ಯಕ್ಷ ಮುರಳಿಕೃಷ್ಣ ಎಂ.ಆರ್., ಟ್ರಸ್ಟಿನ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಟ್ರಸ್ಟಿಗಳಾದ ರಾಮ್ ಕುಮಾರ್, ಅಖಿಲ್ ಸೋಮಯಾಗಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror