ಎ.22 : ಶ್ರೀ ಗುರು ರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ

April 15, 2019
11:14 AM

ಸುಳ್ಯ: ಇಲ್ಲಿನ ಶ್ರೀ ಗುರು ರಾಘವೇಂದ್ರ ಮಠದ ಪ್ರಥಮ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಎ.22 ರಂದು ವೇದಮೂರ್ತಿ ಹರಿ ಎಳಚಿತ್ತಾಯ ನೇತೃತ್ವದಲ್ಲಿ ನಡೆಯಲಿದೆ ಎಂದು ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.00 ರಿಂದ ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಮಂತ್ರ ಹೋಮ, ಮಧ್ಯಾಹ್ನ ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5.00 ಗಂಟೆಗೆ ಆಶ್ಲೇಷಾ ಬಲಿ ಪೂಜೆ, ರಂಗಪೂಜೆ ನೆರವೆರಲಿರುವುದು. ಬಳಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಭಜನೆ ಕಾರ್ಯಕ್ರಮ, ಕುಂಟಾರು ವಾಸುದೇವ ತಂತ್ರಿ ಮತ್ತು ಬಳಗದವರಿಂದ ಭಕ್ತಿಗಾನ ಹಾಗೂ ರಾತ್ರಿ ಧಾರ್ಮಿಕ ಸಭೆ ನಡೆಯಲಿದೆ. ಡಾ. ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿಲಿದ್ದಾರೆ. ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಉಪ್ಪಳ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಡಾ.ಕಿರಣ್ ಕುಮಾರ್, ಕೃಷ್ಣ ಕಾಮತ್ ಅರಂಬೂರು, ಶ್ರೀಕೃಷ್ಣ ಸೋಮಯಾಗಿ, ಶ್ರೀಧರ ಭಾಗವತ ಹರಿಹರ, ಸುಂದರ ಸರಳಾಯ, ಸುಮಾ ಸುಬ್ಬರಾವ್ ಉಪಸ್ಥಿತರಿರಲಿದ್ದಾರೆ. ಬಳಿಕ ಶಿಕ್ಷಕರ ಯಕ್ಷಗಾನ ಒಕ್ಕೂಟದವರಿಂದ ರತಿ ಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಪತ್ರಿಕಾಗೋಷ್ಟಿಯಲ್ಲಿ ಮಠ ನಿರ್ಮಾಣ ಸಮಿತಿ ಕಾರ್ಯಾಧ್ಯಕ್ಷ ಮುರಳಿಕೃಷ್ಣ ಎಂ.ಆರ್., ಟ್ರಸ್ಟಿನ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಟ್ರಸ್ಟಿಗಳಾದ ರಾಮ್ ಕುಮಾರ್, ಅಖಿಲ್ ಸೋಮಯಾಗಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror