ಎಂಬಿಎ ಪದವೀಧರ ಬಾಂಬ್ ಇಡುವ ಕೆಲಸ ಮಾಡಿದ್ದೇಕೆ…?

January 22, 2020
11:58 AM

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಂಕಿತ ಆರೋಪಿ ಎಂಬಿಎ ಪದವೀಧರ ಮಣಿಪಾಲ ಮೂಲದ 34 ವರ್ಷದ  ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಎಂಬಿಎ ಪದವೀಧರನಾಗಿ ಆತ ಈ ಕೆಲಸ ಮಾಡಿದ್ದೇಕೆ ?.

ಇಂಜಿನಿಯರಿಂಗ್ ಪದವಿಯ ಬಳಿಕ ಎಂಬಿಎ ಓದಿರುವ ಆದಿತ್ಯ ರಾವ್ ಕೆಲಸವಿಲ್ಲದೆ ಓಡಾಟ ನಡೆಸುತ್ತಿದ್ದ. ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಯ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ತಾಂತ್ರಿಕ ಕಾರಣಗಳಿಂದ ಆತನ ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ಮಾನಸಿಕವಾಗಿ ನೊಂದಿದ್ದ ಇದರಿಂದ 2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿದ್ದ. ಒಟ್ಟು ಮೂರು ಹುಸಿ ಬೆದರಿಕೆ ಕರೆಗಳನ್ನು ಮಾಡಿದ್ದ ಆತನನ್ನು 2018ರ ಆಗಸ್ಟ್‌ 29ರಂದು ಬಂಧಿಸಲಾಗಿತ್ತು. ನಂತರ ಆತನ ಬಿಡುಗಡೆಯಾಗಿದ್ದ. ಅದಾದ ಬಳಿಕ ಮಣಿಪಾಲದಲ್ಲಿ  ಕೆಲ ಸಮಯ ಇದ್ದು ನಂತರ ಮಂಗಳೂರಿನಲ್ಲಿ  ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿದ್ದ. ಹೋಟೆಲ್ ನಲ್ಲಿ ಸಪ್ಲೈ ಕೆಲಸಕ್ಕೆ ಬಂದವನಿಗೆ ಓದಿನ ಅರ್ಹತೆ ನೋಡಿ ಬಿಲ್ ಮಾಡುವ ಕೆಲಸ ನೀಡಿದ್ದರು. ಹೆಚ್ಚು ಮಾತನಾಡದ ಆದಿತ್ಯ ರಾವ್ ತನ್ನ ಪಾಡಿಗೆ ಇದ್ದ ಎಂದು ತಿಳಿದುಬಂದಿದೆ. ಇದೀಗ ಬಾಂಬ್ ಇರಿಸಿ ಪೊಲೀಸ್ ಅತಿಥಿಯಾಗಿದ್ದಾನೆ.

ಬಾಂಬ್ ತಯಾರು ಮಾಡಿದ್ದು ಹಾಗೂ ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳ ಪ್ರಕಾರ ಈತ ಯೂಟೂಬ್ ನೋಡಿ ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದು, ಆನ್ ಲೈನ್ ಮೂಲಕವೇ ಅದಕ್ಕೆ ಬೇಕಾದ ವಸ್ತುಗಳನ್ನು ತರಿಸಿದ್ದ ಇದಕ್ಕಾಗಿ ಹಲವು ಬಾರಿ ಪ್ರಯತ್ನ ಮಾಡಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಇರಿಸಿದ ಬಳಿಕ ಮಾರುವೇಷದಲ್ಲಿ  ಬೆಂಗಳೂರಿಗೆ ತೆರಳಿದ್ದ ಬಳಿಕ ಭಯಗೊಂಡು ಮಂಗಳವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದ.  ಮನೆಯವರೊಂದಿಗೆ ಹೆಚ್ಚು ಸಂಪರ್ಕವಿಲ್ಲದೆ ಆದಿತ್ಯ ತನ್ನ ಪಾಡಿಗೆ ಇದ್ದ. ಉದ್ಯೋಗದ ಹುಡುಕಾಟ ಎಂದು ಮನೆಯಲ್ಲಿ  ಹೇಳುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror