ಎಲಿಮಲೆ : ಜ್ಞಾನದೀಪ ಯಕ್ಷಗಾನ ಕಲಾ ತಂಡದ ಉದ್ಘಾಟನೆ

June 29, 2019
3:48 PM

ಎಲಿಮಲೆ: ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಜ್ಞಾನದೀಪ ಯಕ್ಷಗಾನ ಕಲಾ ತಂಡದ ಉದ್ಘಾಟನೆ ಹಾಗೂ ತರಬೇತಿ ಕಾರ್ಯಕ್ರಮ ಶನಿವಾರ ಉದ್ಘಾಟನೆಗೊಂಡಿತು.

Advertisement

ಕಾರ್ಯಕ್ರಮವನ್ನು  ಮರ್ಕಂಜ ಪಂಚಸ್ಥಾಪನೆ ದೇವಸ್ಥಾನದ ಮಾಜಿ ಮೊಕ್ತೇಸರ  ಹಾಗೂ ಹಿರಿಯ ಯಕ್ಷಗಾನ ಕಲಾವಿದ ಯುವರಾಜ ಜೈನ್  ಉದ್ಘಾಟಿಸಿದರು. ಯಕ್ಷಗಾನ ಗುರುಗಳಾದ ಶೇಖರ ಮಣಿಯಾಣಿ ಸುಳ್ಯ ಸ್ವರಚಿತ ಹಾಡಿನ ಮೂಲಕ ಯಕ್ಷಗಾನ ತರಬೇತಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಸಭಾಧ್ಯಕ್ಷತೆ ವಹಿಸಿದ್ದ  ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ತಳೂರು, ಯಕ್ಷಗಾನವು ನಮ್ಮ ಕರಾವಳಿಯ ಪ್ರಸಿದ್ಧ ಕಲೆಗಳಲ್ಲಿ  ಒಂದು. ಇದನ್ನು  ಉಳಿಸಿ ಬೆಳೆಸಲು ಇಂದಿನ ಮಕ್ಕಳಿಗೆ ಇದರ ಕಲಿಕೆ ಅಗತ್ಯ ಎಂದರು.

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ನಿರ್ದೇಶಕರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಭಾಸ್ಕರ ರಾವ್ ಉಬರಡ್ಕ, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಪ್ರಾಥಮಿಕ ವಿಭಾಗದ ಮಖ್ಯೋಪಾಧ್ಯಾಯ ಪುನೀತ್ ರವಿ , ಯಕ್ಷಗುರು ರಾಧಾಕೃಷ್ನ ಕಲ್ಲುಗುಂಡಿ ಉಪಸ್ಥಿತರಿದ್ದರು

ಶಾಲಾ ಶಿಕ್ಷಕಿಯರಾದ ಹರ್ಷಿತಾ ಸ್ವಾಗತಿಸಿ, ಶ್ರೀಮತಿ ಭಾರತಿ ವಂದಿಸಿದರು. ಶ್ರೀಮತಿ ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ |
May 3, 2025
2:11 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
May 3, 2025
6:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group