ಎಲಿಮಲೆ : ವಿದ್ಯಾರ್ಥಿಗಳಿಂದ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೊಂದು ಭೇಟಿ ಕಾರ್ಯಕ್ರಮ

November 2, 2019
9:34 AM

ಎಲಿಮಲೆ: ವಿದ್ಯಾರ್ಥಿ ಪೋಲೀಸ್ ಕ್ಯಾಡೆಟ್ ಕಾರ್ಯಕ್ರಮದ ಅಂಗವಾಗಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿನ ವಿದ್ಯಾರ್ಥಿಗಳಿಂದ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೊಂದು ಭೇಟಿ ಕಾರ್ಯಕ್ರಮ ನಡೆಯಿತು.

Advertisement
Advertisement

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ್ ಪೇರಾಲು, ಸಹಶಿಕ್ಷಕರಾದ ರಾಜೇಶ್ವರಿ ಕೇನಾಜೆ, ಶಿಕ್ಷಕ ವಸಂತ, ಪೋಲೀಸ್ ಅಧಿಕಾರಿ ಅನಿಲ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಮ್ ಕಣೆಮರಡ್ಕ ಗ್ರಂಥಾಲಯದ ಮಾಹಿತಿ, ಪುಸ್ತಕ ನಿರ್ವಹಣೆ ಮತ್ತು ಓದುವಿಕೆಯ ಮಹತ್ವ ,ಗ್ರಂಥಾಲಯದ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯರು ಮಾತನಾಡಿ ಗ್ರಂಥಾಲಯದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಬಳಿಕ ಗ್ರಾಮ ಪಂಚಾಯತ್ ವತಿಯಿಂದ ಸಭಾಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಪೇರಾಲು ಗ್ರಾಮ ಪಂಚಾಯತ್ ಪ್ರಭಾರ ಪಿ. ಡಿ. ಓ ಗುರುಪ್ರಸಾದ್, ಸಹಶಿಕ್ಷಕಿ ರಾಜೇಶ್ವರಿ ಸುಂದರ ಕೇನಾಜೆ, ಪೋಲೀಸ್ ಅಧಿಕಾರಿ ಅನಿಲ್ ಉಪಸ್ಥಿತರಿದ್ದರು.

Advertisement

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಬಗ್ಗೆ ಮಾಹಿತಿ ಮತ್ತು ಸೌಲಭ್ಯ, ಹಲವಾರು ಯೋಜನೆಗೆಳ ವಿವರಣೆಯನ್ನು ಪಿ. ಡಿ. ಓ. ತಿಳಿಸಿದರು ಮತ್ತು ಮಕ್ಕಳ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಿತು. ಪಂಚಾಯತ್ ಸಿಬ್ಬಂದಿ ವರ್ಗ ಶಾಲೆಯ ಸಹಶಿಕ್ಷಕ ವಸಂತ ಭಾಗವಹಿಸಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ಯಾರಂಟಿಗಳೂ ಮುಂದುವರೆಯುತ್ತವೆ : ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ : ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ
ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ
Karnataka Weather | 20-05-2024 | ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಪರಿಣಾಮ ಮುಂಗಾರು ದುರ್ಬಲವಾಗುವ ಸಾಧ್ಯತೆ |
May 20, 2024
11:16 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror