ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪುನರ್ ಮನನ ಪಾಠ

April 29, 2020
9:35 AM

ಮಂಗಳೂರು : 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯಿಂದಾಗಿ ಮುಂದೂಡಲಾಗಿರುತ್ತದೆ. ದೂರದರ್ಶನದಲ್ಲಿ ಕನ್ನಡ, ಇಂಗ್ಷಿಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ಸಿದ್ಧಪಡಿಸಿರುವ ಪಾಠಗಳನ್ನು ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ 4.30 ಗಂಟೆವರೆಗೆ ದೂರದರ್ಶನದಲ್ಲಿ ಪ್ರಸಾರ (ಚಂದನ ವಾಹಿನಿಯಲ್ಲಿ) ಮಾಡಲಾಗುತ್ತಿದೆ. ಇದೇ ಕಾರ್ಯಕ್ರಮದ ಮರು ಪ್ರಸಾರವನ್ನು ಮರುದಿನ ಬೆಳಿಗ್ಗೆ 6 ಗಂಂಟೆಯಿಂದ 7.30 ರವರೆಗೆ ಎಲ್ಲಾ ದಿನಗಳಂದು ನಡೆಸಲಾಗುವುದು.

Advertisement
Advertisement

ಬೇಸಿಗೆ ರಜಾ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಲು ಅವರ ಸೃಜನಾತ್ಮಕತೆಯನ್ನು ಪ್ರೋತ್ಸಾಹಿಸಲು  ಹಾಗೂ ಮನರಂಜನೆಗಾಗಿ ‘ಮಕ್ಕಳವಾಣಿ’ ಎಂಬ ಕಾರ್ಯಕ್ರಮ ಮಕ್ಕಳವಾಣಿ ಯೂಟ್ಯೂಬ್ ಚಾನಲ್‍ನಲ್ಲಿ ಈಗಾಗಲೇ ಪ್ರಸಾರವಾಗುತ್ತಿದೆ. ಸದರಿ ಕಾರ್ಯಕ್ರಮವನ್ನು ಮತ್ತೊಮ್ಮೆ  ದೂರದರ್ಶನದ (ಚಂದನ ವಾಹಿನಿಯಲ್ಲಿ) ಮೂಲಕ ಏಪ್ರಿಲ್ 29 ರಿಂದ ಮೇ. 28 ರವರೆಗೆ ಸಂಜೆ 5 ಗಂಟೆಯಿಂದ 5.30 ರವರೆಗೆ ಪ್ರಸಾರ ಮಾಡಲಾಗುವುದು. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು ಪರೀಕ್ಷಾ ಸಿದ್ಧತೆಯನ್ನು ಮಾಡಿಕೊಳ್ಳಲು ಹಾಗೂ ಜ್ಞಾನಾರ್ಜನೆಯನ್ನು ಮಾಡಿಕೊಳ್ಳಲು ಅನುಕೂಲವಾಗುವುದು ಎಂದು ನಿರ್ದೇಶಕರು, ರಾಜ್ಯ ಶಿಕ್ಷಣ  ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ
May 15, 2024
11:31 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ
May 15, 2024
11:09 PM
by: The Rural Mirror ಸುದ್ದಿಜಾಲ
ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ
May 15, 2024
10:50 PM
by: The Rural Mirror ಸುದ್ದಿಜಾಲ
ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ
May 15, 2024
10:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror