ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆ

February 4, 2020
10:05 AM

ವಿಟ್ಲ: ಮನೆ ಮನೆಗಳಲ್ಲಿ ತುಳು ಭಾಷೆ ಮಾತನಾಡುವ ಮೂಲಕ ತುಳು ಮಾತೆಯ ಉತ್ಸವ ನಡೆಯಬೇಕು. ತುಳುವರಲ್ಲಿ ಎದ್ದೇಳುವ ಪ್ರವೃತ್ತಿಯ ಕೊರತೆ ಇದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

Advertisement
Advertisement

Advertisement

ಅವರು ಸೋಮವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ನಡೆಯುತ್ತಿರುವ ಶ್ರೀ ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆ ಪ್ರಯುಕ್ತ ನಡೆದ ಇಪ್ಪತ್ತನೇ ತುಳು ಸಾಹಿತ್ಯ ಸಮ್ಮೇಳನೊವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು. ವಿಶ್ವವಿದ್ಯಾಲಯಗಳಲ್ಲಿ ತುಳು ಭಾಷೆಗೆ ಮಾನ್ಯತೆ ತುಳು ಭವಿಷ್ಯದ ದೃಷ್ಟಿಯಲ್ಲಿ ಒಳ್ಳೆಯ ಕಾರ್ಯವಾಗಿದೆ. ತುಳು ಕಾರ್ಯಕ್ಕೆ ಇಳಿದಾಗ ಮಾತ್ರ ನಮ್ಮ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಲು ಸಾಧ್ಯ. ಆನಂದದ ಮೂಲ ತ್ಯಾಗದಲ್ಲಿದೆ. ತ್ಯಾಗದಲ್ಲಿ ಮಾತ್ರ ಆನಂದದ ಅನುಭವವಿದೆ. ತುಳುವರಲ್ಲಿ ಹೃದಯ ಸಿರಿವಂತಿಕೆ ಇದೆ ಎಂದರು.

Advertisement

ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಎ ಸುಬ್ಬಣ್ಣ ರೈ ಮಾತನಾಡಿ ರಾಜ್ಯದಲ್ಲಿ ಕನ್ನಡ ಬಳಕೆಯ ಮಧ್ಯೆ ತುಳುವನ್ನು ಸುಭದ್ರವಾಗಿಸುವುದು. ಸವಾಲಿನ ಕಾರ್ಯ. ತುಳು ಭಾಷೆ ಒಳ ಮಗ್ಗುಲಿಗಳ ಬಗ್ಗೆ ಆಳವಾದ ಅಧ್ಯಯನ ನಡೆಯಬೇಕು. ತುಳು ಭಾಷೆ ಸಂಸ್ಕೃತಿ ವಿಚಾರದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಇಡಬೇಕು ಎಂದರು.

Advertisement

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಡಾ. ಪಿ.ಎಸ್ ಎಡಪಡಿತ್ತಾಯ ಮಾತನಾಡಿ ಕಲೆ ಸಾಹಿತ್ಯಕ್ಕೆ ಬೆಂಬಲ ನೀಡುವ ಸಂತರಾಗಿದ್ದಾರೆ. ತುಳು ತೇರು ಎಳೆಯಲು ನಾವೆಲ್ಲರೂ ಕೈಜೋಡಿಸಬೇಕು. ತುಳು ಭಾಷೆ ಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರತಿಯೊಬ್ಬ ತುಳುವರು ಪ್ರಯತ್ನಿಸಬೇಕು ಎಂದರು

Advertisement

ಮಲಾರ್ ಜಯರಾಮ ರೈ ಅವರ ಸಂಪದಕತ್ವದಲ್ಲಿ ರಚಿಸಲಾದ ಅವಧೂತ ಪಜ್ಜೆಲು ಪುಸ್ತಕ ಬಿಡುಗಡೆಗೊಳಿಸಲಾಯಿತು. ಬೆಳಿಗ್ಗೆ ಸಂಸ್ಥಾನದಿಂದ ಸಭಾ ವೇದಿಕೆವರೆಗೆ ಮೆರವಣಿಗೆ ನಡೆಯಿತು. ಸಾಧ್ವೀ ಮಾತಾನಂದ ಮಯೀ ದಿವ್ಯ ಉಪಸ್ಥಿತಿ ಕರುಣಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್ ಸಾಲ್ಯಾನ್, ಮಲಾರ್ ಜಯರಾಮ ರೈ ಉಪಸ್ಥಿತರಿದ್ದರು.
ಒಡಿಯೂರು ಗ್ರಾಮ ವಿಕಾಸ ಯೋಜನೆಯ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ ನಿರೂಪಿಸಿದರು. ರೇಣುಕಾ ಎಸ್ ರೈ ಪ್ರಾರ್ಥಿಸಿದರು. ತುಳು ಸಾಹಿತ್ಯ ಸಮ್ಮೇಳನ ಸಮಿತಿ ಸಂಚಾಲಕ ಡಾ. ವಸಂತಕುಮಾರ್ ಪೆರ್ಲ ಸ್ವಾಗತಿಸಿದರು. ಜಯಪ್ರಕಾಶ್ ವಂದಿಸಿದರು. ಯಶವಂತ ವಿಟ್ಲ ಪರಿಚಯಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror