ಕಟ್ಟದ ಈ ಸೇತುವೆ ಅಭಿವೃದ್ಧಿಗೆ “ಮೈಲಿಗೆ”ಯೇ…?, ಹಾಗಂತ ಕೇಳ್ತಾರೆ ಜನ…!

May 4, 2019
9:30 AM

ಕೊಲ್ಲಮೊಗ್ರ: ಕಳೆದ 3 ವರ್ಷಗಳಿಂದ ಮೋರಿಯೊಂದು ಕುಸಿಯಲು ಸಿದ್ಧವಾಗಿದೆ. ಇಂದೋ ನಾಳೆಯೋ ಬೀಳುವ ಹಂತದಲ್ಲಿದೆ. ಹಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತಿಲ್ಲ ಅಂತ ಜನ ಬೊಬ್ಬೆ ಹೊಡೆಯುತ್ತಾರೆ. ಯಾರಾದ್ರೂ ಸ್ವಲ್ಪ ಈ ಕಡೆ ನೋಡ್ತೀರಾ ? ಹಾಗಿದ್ರೆ ಇಲ್ಲಿದೆ ನೋಡಿ ಸ್ಟೋರಿ….

Advertisement
Advertisement
ಶಿಥಿಲಗೊಂಡ ಸೇತುವೆ

ಕೊಲ್ಲಮೊಗ್ರು ಗ್ರಾಮದ  ಕೊಲ್ಲಮೊಗ್ರದಿಂದ ಕಟ್ಟ – ಕರಂಗಲ್ಲು – ಮಡಪ್ಪಾಡಿಗೆ ನೇರ ಸಂಪರ್ಕ ಇರುವ ಜಿಪಂ  ರಸ್ತೆ ಇದೆ. ಇಲ್ಲಿ  ಕಟ್ಟ – ಮೈಲ ಎಂಬಲ್ಲಿ ಒಂದು ಮೋರಿ ಇದೆ. ಕಳೆದ ಮೂರು ವರ್ಷದ ಹಿಂದೆಯೇ ಮೋರಿಯೊಂದು ಇಂದೋ ನಾಳೆಯೋ ಅನ್ನೋ ಸ್ಥಿತಿಯಲ್ಲಿದೆ.  ಹೀಗಾಗಿ ಈ ಮೋರಿ ಕುಸಿತವಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ. ಈ ಸಮಸ್ಯೆ ಬಗ್ಗೆ ಅನೇಕ ಬಾರಿ ಅಧಿಕಾರಿಗಳು ಬಂದು ಪರೀಕ್ಷಿಸಿ ಸದ್ಯದಲ್ಲೇ  ನಿರ್ಮಾಣ ಮಾಡಿ ಕೊಡುವ ಭರವಸೆ ನೀಡಿದ್ದರೂ ಮೂರು ಮಳೆಗಾಲ ಕಳೆದು ಇನ್ನೂ ಮೋರಿ ಮಾತ್ರಾ ಆಗಿಲ್ಲ.

ಕುಸಿತಗೊಂಡ ಸೇತವೆ

ಈ ವರ್ಷದ ಮಳೆಗಾಲದಲ್ಲಿ ಇಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ, ಅದೂ ಅಲ್ಲದೆ ನಡೆದು ಹೋಗಲೂ ಕಷ್ಟವಾಗುವ ಸಂಭವ ಇದೆ ಎಂದು ಸ್ಥಳೀಯರು ಅಳಲು ತೋಡುತ್ತಾರೆ.  ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದ ತಕ್ಷಣವೇ ಕ್ರಮವಾಗಬೇಕು, ಕನಿಷ್ಠ ದುರಸ್ತಿಯಾದರೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ಮಾತನಾಡಿದ ಸ್ಥಳೀಯರಾದ ಮಿಥುನ್ ಕುಮಾರ್ ಸೋನ, ” ಕಳೆದ 3 ವರ್ಷಗಳಿಂದ ಈ ಮೋರಿ ದುರಸ್ತಿಗೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರೂ ಯಾವುದೇ ಕ್ರಮ ಆಗಿಲ್ಲ, ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು” ಎಂದು ಒತ್ತಾಯಿಸಿದ್ದಾರೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group