ಕನಕಮಜಲು ಮಕ್ಕಳ ದಿನಾಚರಣೆ

November 16, 2019
10:45 AM

ಕನಕಮಜಲು: ನೆಹರು ಯುವಕೇಂದ್ರ ಮಂಗಳೂರು, ಮತ್ತು ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಮತ್ತು ಅಂಗನವಾಡಿ ಕೇಂದ್ರ ಕನಕಮಜಲು ಇದರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗು ಯುವಕೇಂದ್ರ ಸ್ಥಾಪನಾ ದಿನಾಚರಣೆಯನ್ನು ನ. 14 ರಂದು ಕನಕಮಜಲಿನ ಅಂಗನವಾಡಿ ಕೇಂದ್ರದಲ್ಲಿ ನಡೆಯಸಲಾಯಿತು.

ಇದರ ಪ್ರಯುಕ್ತ ಪುಟಾಣಿ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಸಿ ಬಹುಮಾನವನ್ನು ವಿತರಿಸಿ, ಸಿಹಿ ತಿಂಡಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ, ಯುವಕ ಮಂಡಲದ ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಬಾಲವಿಕಾಸ ಸಮಿತಿ ಅಧ್ಯಕ್ಷೆ ಧರ್ಮವತಿ ಕುತ್ಯಾಳ, ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಕಾಪಿಲ ಹಾಗೆ ಯುವಕ ಮಂಡಲದ ಸದಸ್ಯರು ಮತ್ತು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಕಾಪಿಲ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror