ಕರಾವಳಿಯಲ್ಲಿ “ಕ್ಯಾರ್” ಚಂಡಮಾರುತಕ್ಕೆ “ಕೇರ್” : ಬೆನ್ನುಬೆನ್ನಿಗೇ 3 ಚಂಡಮಾರುತದ ಸುಳಿಯಲ್ಲಿ ಕರಾವಳಿ…!

October 24, 2019
9:20 PM

ಮಂಗಳೂರು: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಉದ್ಭವಿಸಿದ “ಕ್ಯಾರ್” ಚಂಡ ಮಾರುತ ಕರಾವಳಿ ಕಡೆಗೆ ಅಪ್ಪಳಿಸುತ್ತಿದೆ. ಹೀಗಾಗಿ ಇಡೀ ಕರಾವಳಿ ತೀರದಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದ್ದು ಮುಂಬಯಿ, ಗೋವಾ, ಕಾರವಾರ, ಉಡುಪಿ, ಮಂಗಳೂರು ಕರಾವಳಿ ತೀರಕ್ಕೆ ಅಪ್ಪಳಿಸಲಿದೆ. ಹೀಗಾಗಿ ಮುಂದಿನ 24 ಗಂಟೆಗಳಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಕಾರಣದಿಂದ ಕರಾವಳಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸಲಾಗಿದೆ.  ಕ್ಯಾರ್ ಬೆನ್ನಿಗೇ ಇನ್ನೆರಡು  3 ಚಂಡಮಾರುತ ಬೀಳುವ ಸಾಧ್ಯತೆ ಇದೆ. ಸದ್ಯದ ಹವಾಮಾನದ ಪ್ರಕಾರ  “ಕ್ಯಾರ್” ಬಳಿಕ “ಮಹಾ” ನಂತರ “ಬುಲ್ ಬುಲ್”  ಚಂಡಮಾರುತವೂ ಸಿದ್ಧವಾಗಿದೆ.

ಕರ್ನಾಟಕದಲ್ಲಿ ‘ಕ್ಯಾರ್’ ಚಂಡಮಾರುತ ಅಬ್ಬರಿಸಲಿದೆ. ಮುಂದಿನ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಸಿಲಾಗಿದೆ. ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪಗಳಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಅನೇಕ ಕಡೆ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ  ಜಿಲ್ಲಾಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಆದೇಶಿಸಲಾಗಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ 1077 ಸಂಖ್ಯೆಗೆ ಕರೆ ಮಾಡುವಂತೆ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಇದರ ಬೆನ್ನಿಗೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಳ್ಳುತ್ತಿದ್ದು “ಮಹಾ” ಹೆಸರಿನ ಚಂಡಮಾರುತ  ಅ.25 ರ ಹೊತ್ತಿಗೆ ಕಾಣಿಸಲಿದೆ. ಅ.26 ರಂದು ಮತ್ತಷ್ಟು ವಾಯುಭಾರ ಕುಸಿತದೊಂದಿಗೆ ತಮಿಳುನಾಡು ಕರಾವಳಿ ತೀರ, ಪಾಂಡಿಚೇರಿ ಮೊದಲಾದ ಕಡೆಗಳಲ್ಲಿ  ಅಪ್ಪಳಿಸಿ ಶ್ರೀಲಂಕಾದಲ್ಲೂ ಕಾಣಿಸಿಕೊಂಡು ಕೇರಳದ ಪ್ರವೇಶಿಸುವ ವೇಳೆ ದುರ್ಬಲವಾಗಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾರ್ ಹಾಗೂ ಮಹಾ ಚಂಡಮಾರುತದ ಕಾರಣದಿಂದಾಗಿ ಇನ್ನೊಂದು ಚಂಡಮಾರುತ “ಬುಲ್ ಬುಲ್ ”  ಕಾಣಿಸಬಹುದು ಎಂದು ಅಂದಾಜಿಸಲಾಗಿದೆ ಇದು ಅ.27 ರ ಹೊತ್ತಿಗೆ ಫಿಲಿಫೈನ್ ನಲ್ಲಿ ಅಪ್ಪಳಿಸಿ ನಂತರ  ಎರಡು ದಿನಗಳಲ್ಲಿ ದಕ್ಷಿಣ ಚೀನಾದ ಸಮುದ್ರದಲ್ಲಿ  ಕಾಣಿಸಿಕೊಂಡು ಭಾರತದಲ್ಲೂ ಕಾಣಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror