ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಡಾ. ಯಂ.ಜಿ. ನಾಯಕ್

February 28, 2020
6:31 PM

ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ರವರು ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.

ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ.

ಡಾ ಯಂ.ಜಿ. ನಾಯಕ್ ರವರು ಕಳೆದ 30 ವರ್ಷಗಳಿಂದ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತೋಟಗಾರಿಕಾ ವಿಜ್ಞಾನಿಯಾಗಿದ್ದು ತಳಿ ಅಭಿವೃದ್ಧಿ, ವೈವಿಧ್ಯತೆ ಸಂರಕ್ಷಣೆ, ಪುನಶ್ಚೇತನ, ಸಾಂದ್ರ ಮತ್ತು ಘನ ಸಾಂದ್ರ ಗೇರು ಕೃಷಿ ಪದ್ದತಿ, ಗೇರು ನರ್ಸರಿ ಹಾಗೂ ಯೋಗ್ಯ ತಳಿಗಳ ಗಿಡಗಳನ್ನು ರೈತರಿಗೆ ಒದಗಿಸುವುದು, ರೈತರಿಗೆ ಹಾಗೂ ಅಭಿವೃದ್ಧಿ ಇಲಾಖೆಗಳಿಗೆ ಮಾಹಿತಿ ಹಾಗೂ ಸಲಹೆ ನೀಡುವಿಕೆ ಮೂಲಕ ಗೇರು ಅಭಿವೃದ್ಧಿಗೆ ಮಹತ್ತರ ಕೊಡುಗೆಯನ್ನು ಕೊಟ್ಟಿರುತ್ತಾರೆ. ರೈತರೊಂದಿಗೆ ನೇರ ಸಂಪರ್ಕ ಹಾಗೂ ಕೃಷಿ ವಿಸ್ತರಣೆಯಲ್ಲಿ ಬಹಳಷ್ಟು ಶ್ರಮಿಸಿರುತ್ತಾರೆ. ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸದಸ್ಯತ್ವ ಇದೀಗ ಇವರ ಸಾಧನೆಗೆ ಹಿಡಿದ ಕೈಗನ್ನಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror