ಕಲ್ಮಕಾರು ಗ್ರಾಮಕ್ಕೆ ತಹಶೀಲ್ದಾರ್ ತಂಡ ಭೇಟಿ

June 14, 2019
11:30 PM

ಸುಳ್ಯ: ಕಳೆದ ವರ್ಷ ಮಳೆಗಾಲದಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ಕಲ್ಮಕಾರು ಪ್ರದೇಶಕ್ಕೆ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ವರ್ಷ ಗುಡ್ಡ ಬಿರುಕು ಬಿಟ್ಟ ಸ್ಥಳಕ್ಕೆ ಮತ್ತು ಗುಡ್ಡ ಕುಸಿಯುವ ಭೀತಿಯಲ್ಲಿದ್ದ ಪ್ರದೇಶದ ಮನೆಗಳಿಗೆ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಮಳೆ ಜಾಸ್ತಿಯಾದರೆ ಅಲ್ಲಿ ವಾಸಿಸುವ ಕುಟುಂಬಗಳನ್ನು ಕಲ್ಮಕಾರಿನ ಶಾಲೆ ಮತ್ತು ಅಂಗನವಾಡಿ ಕಟ್ಟಡಕ್ಕೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಗುಡ್ಡ ಕುಸಿಯುವ ಭೀತಿಯಿರುವ ಪ್ರದೇಶದ ಕುಟುಂಬಗಳಿಗೆ ಬೇರೆ ಕಡೆ ಸರಕಾರಿ ಜಮೀನು ಕಾಯ್ದಿರಿಸಿ ಪಂಚಾಯತ್ ವತಿಯಿಂದ ಮನೆ ನಿರ್ಮಿಸಲು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಸೇತುವೆ ನಿರ್ಮಾಣವಾಗದ ಹಿನ್ನಲೆಯಲ್ಲಿ ಕಲ್ಮಕಾರಿನ ಜನ ಚುನಾವಣಾ ಬಹಿಷ್ಕಾರ ಘೋಷಿಸಿದ್ದಲ್ಲಿ ಸೇತುವೆ ಕಾಮಗಾರಿ ನಡೆಯುವ ಸ್ಥಳಕ್ಕೂ ಅವರು ಭೇಟಿ ನೀಡಿದರು. ಚುನಾವಣಾ ಸಂದರ್ಭದಲ್ಲಿ ತಹಶೀಲ್ದಾರ್ ಭೇಟಿ ನೀಡಿ ಸೇತುವೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಹಿನ್ನಲೆಯಲ್ಲಿ ಮತದಾನ ಬಹಿಷ್ಕಾರ ಹಿಂಪಡೆದಿದ್ದರು. ಬಳಿಕ ಸೇತುವೆಯ ಕಾಮಗಾರಿ ಆರಂಭವಾಗಿತ್ತು. ಸೇತುವೆ ಕಾಮಗಾರಿಯನ್ನು ತಹಶೀಲ್ದಾರ್ ಪರಿಶೀಲಿಸಿದರು.

ಕಂದಾಯ ನಿರೀಕ್ಷಕ ಶಂಕರ್ ಎಂ.ಎಲ್, ಗ್ರಾಮ ಲೆಕ್ಕಾಧಿಕಾರಿ ಶರತ್ ಎಸ್.ಆರ್., ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ ಮತ್ತಿತರರು ಉಪಸ್ಥಿತರಿದ್ದರು. ಪ್ರಕೃತಿ ವಿಕೋಪ ಉಂಟಾದಲ್ಲಿ ಗ್ರಾಮ ಮಟ್ಟದಲ್ಲಿ ರಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror