ಕಳಂಜ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ

August 28, 2019
11:00 AM

ಬೆಳ್ಳಾರೆ: ಕಳಂಜ ಗ್ರಾಮ ಪಂಚಾಯತ್ ನ  2019-20ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ನೋಡೆಲ್ ಅಧಿಕಾರಿ ದೇವರಾಜ್ ಮುತ್ಲಾಜೆ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಸಂಯೋಜನಾಧಿಕಾರಿ ರೋಹಿತ್ ನರೇಗಾ ಯೋಜನೆಯ ಬಗ್ಗೆ ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಅತೀ ದೊಡ್ಡ ಯೋಜನೆ ಇದಾಗಿದೆ. ನರೇಗಾ ಯೋಜನೆಯ ಫಲವನ್ನು ಗರಿಷ್ಠ ಮಟ್ಟದಲ್ಲಿ ಗ್ರಾಮದ ಜನರು ಬಳಸಿಕೊಳ್ಳಬೇಕು ಎಂದರು.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಮಾಹಿತಿ ನೀಡುತ್ತಾ 2019-20ನೇ ಸಾಲಿನಲ್ಲಿ ಸರಕಾರದಿಂದ ದೊರೆಯುವ ಅನುದಾನದ ಪಟ್ಟಿ ವಾಚಿಸುತ್ತಾ ಬಾವಿ ನಿರ್ಮಾಣಕ್ಕೆ 1 ಲಕ್ಷದ 28 ಸಾವಿರ ರೂಪಾಯಿ, ಜಲಮರುಪೂರಣ ಘಟಕ ನಿರ್ಮಾಣಕ್ಕೆ 22 ಸಾವಿರ ರೂಪಾಯಿ, ದನದ ಹಟ್ಟಿ ನಿರ್ಮಾಣಕ್ಕೆ 23 ಸಾವಿರ ರೂಪಾಯಿ, ಕೃಷಿಹೊಂಡ ನಿರ್ಮಾಣಕ್ಕೆ 85ಸಾವಿರ ರೂಪಾಯಿ, ಆಡು ಮತ್ತು ಕುರಿ ಶೆಡ್ ನಿರ್ಮಾಣಕ್ಕೆ 19600 ರೂಪಾಯಿ, ಕೋಳಿ ಶೆಡ್ ನಿರ್ಮಾಣಕ್ಕೆ 50 ಸಾವಿರ ರೂಪಾಯಿ, ಶೌಚಾಲಯ ನಿರ್ಮಾಣಕ್ಕೆ 12 ಸಾವಿರ ರೂಪಾಯಿ ದೊರೆಯವುದೆಂದು ಹೇಳಿದರು.
ತೋಟಗಾರಿಕಾ ತಾಂತ್ರಿಕ ಸಹಾಯಕಿ ನಿಶಾ ಮಾಹಿತಿ ನೀಡುತ್ತಾ ಅಡಿಕೆ ಪುನಶ್ಚೇತನಕ್ಕೆ ಹಾಗು ಬಾಳೆಕೃಷಿಗೆ ಇಲಾಖೆಯಿಂದ ಸಹಕಾರವಿದೆ ಎಂದರು. ಅಡಿಕೆ ಒಂದು ಗುಂಡಿ 2.30 ಫೀಟು ಉದ್ದ ಅಗಲ ಇದ್ದರೆ 310 ರೂಪಾಯಿಗಳಂತೆ, 3ಫೀಟು ಉದ್ದ ಮತ್ತು ಅಗಲದ ತೆಂಗು ಗುಂಡಿಯೊಂದಕ್ಕೆ 310 ರೂಪಾಯಿಗಳಂತೆ, 1.30 ಫೀಟು ಆಳದ ಕಾಳು ಮೆಣಸು ಗುಂಡಿಗೆ 50ರೂಪಾಯಿ, ವೀಳ್ಯದೆಲೆಗೆ 40ರೂಪಾಯಿ, ಗೇರು ಕೃಷಿಯಲ್ಲಿ 3ಫೀಟು ಉದ್ದ ಮತ್ತು ಅಗಲದ ಗುಂಡಿಯೊಂದಕ್ಕೆ 70ರೂಪಾಯಿಯಂತೆ ಇಲಾಖೆಯಿಂದ ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋಧ .ಎಂ, ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ.ಕೆ ಉಪಸ್ಥಿತರಿದ್ದರು.

ಪಿಡಿಒ ಶ್ರೀಧರ್ ಕೆ.ಆರ್ ಸ್ವಾಗತಿಸಿ ವಂದಿಸಿದರು. ದಿವ್ಯ ವರದಿ ವಾಚಿಸಿದರು. ಜಯರಾಮ್ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror