ಕಸದ ಸಮಸ್ಯೆ ಪರಿಹಾರಕ್ಕೆ ಶಾಸಕರ ನೇತೃತ್ವದಲ್ಲಿ ಸಭೆ ಕರೆಯಲು ನಿರ್ಧಾರ

November 1, 2019
10:58 AM

ಸುಳ್ಯ: ಸುಳ್ಯ ನಗರದ ಕಸ ಸಮಸ್ಯೆಯ ಪರಿಹಾರಕ್ಕೆ ಶಾಸಕ ಎಸ್.ಅಂಗಾರ ನೇತೃತ್ವದಲ್ಲಿ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ಮೂರು ದಿನದಲ್ಲಿ ಕರೆಯಲು ನಿರ್ಧರಿಸಲಾಗಿದೆ.

ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಗುರುವಾರ ಸಂಜೆ ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕರ ಸಮಯ ಲಭಿಸಿದ ಕೂಡಲೇ ಜನಪ್ರತಿನಿಧಿಗಳು ಹಾಗು ಅಧಿಕಾರಿಗಳ ಸಭೆ ಕರೆದು ಸಮಗ್ರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು. ಒಂದು ವಾರದ ಮಟ್ಟಿಗೆ ಹಸಿ ಕಸವನ್ನು ಮಾತ್ರ ಸಂಗ್ರಹಿಸಲು ನಿರ್ಧರಿಸಲಾಯಿತು. ಪ್ಲಾಸ್ಟಿಕ್ ತ್ಯಾಜ್ಯ ನೀಡದಂತೆ ಜನರಲ್ಲಿ ಜಾಗೃತಿ ಮೂಡಿಸಲು ನಗರ ಪಂಚಾಯತ್ ಸಿಬ್ಬಂದಿಗಳಿಗೆ ಸೂಚಿಸಲಾಯಿತು.

ನ.ಪಂ. ಮುಖ್ಯಾಧಿಕಾರಿ ಎನ್.ಮತ್ತಡಿ, ನ.ಪಂ. ಮಾಜಿ ಅಧ್ಯಕ್ಷ ಎನ್.ಎ ರಾಮಚಂದ್ರ, ನ.ಪಂ ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್, ಶರೀಫ್ ಕಂಠಿ, ನ.ಪಂ. ಇಂಜಿನಿಯರ್ ಶಿವಕುಮಾರ್, ಆರೋಗ್ಯಾಧಿಕಾರಿ ರವಿಕೃಷ್ಣ, ಸ್ವಚ್ಛ ಸುಳ್ಯ ತಂಡದ ವಿನೋದ್ ಲಸ್ರಾದೋ, ಲೋಕೇಶ್ ಗುಡ್ಡೆಮನೆ ಮತ್ತಿತರರು ಉಪಸ್ಥಿತರಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror