ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಅಡ್ಡಿಪಡಿಸುವ ಉದ್ದೇಶವಿರಲಿಲ್ಲ: ರಿಯಾಝ್ ಕಟ್ಟೆಕ್ಕಾರ್ ಸ್ಪಷ್ಟನೆ

June 12, 2019
12:33 PM

ಸುಳ್ಯ: ಕಾಂಗ್ರೆಸ್ ಸಭೆಗೆ ತೆರಳಿ ಕಾಂಗ್ರೆಸ್ ಸಭೆಯನ್ನು ಅಡ್ಡಿಪಡಿಸುವ ಉದ್ದೇಶ ಇರಲಿಲ್ಲ ಎಂದು ನಗರ ಪಂಚಾಯತ್ ಪಕ್ಷೇತರ ಸದಸ್ಯ ರಿಯಾಝ್ ಕಟ್ಟೆಕ್ಕಾರ್ ತಿಳಿಸಿದ್ದಾರೆ.

Advertisement
Advertisement

ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗೆ ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಮಂಗಳವಾರ ಸುಳ್ಯಕ್ಕೆ ಭೇಟಿ‌ ನೀಡಿದರು. ಸಭೆಯ ಬಳಿಕ ಬೂಡು ವಾರ್ಡಿನ ಅಂಗನವಾಡಿಯ ತಡೆಗೋಡೆ ನಿರ್ಮಾಣದ ವಿಚಾರವಾಗಿ ಐವನ್ ಡಿಸೋಜಾ ಅವರನ್ನು ಬೂಡು ವಾರ್ಡಿಗೆ ಕರೆದುಕೊಂಡು ಹೋಗಲು ಯತ್ನಿಸಿದ್ದೆ. ಈ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಐವನ್ ಡಿಸೋಜಾ ಅವರು ನನ್ನ ವಾರ್ಡಿಗೆ ಬರುವುದನ್ನು ತಡೆದರು. ನಂತರ ಐವನ್ ಡಿಸೋಜಾ ಅವರು ಪೂರ್ವ ನಿಗದಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ತೆರಳಿದ್ದರು.

ಸಭೆ ನಡೆಯುತ್ತಿದ್ದಾಗ ನಾನು ಐವನ್ ಡಿಸೋಜಾ ಅವರನ್ನು ನನ್ನ ವಾರ್ಡ್ ಗೆ ಕರೆದುಕೊಂಡು ಹೋಗಲು ನಿಂತಿದ್ದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ ನಡೆದು ಸಭೆ ಅರ್ಧಕ್ಕೆ ಮೊಟಕುಗೊಂಡಿತು. ನನಗೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಅಡ್ಡಿಪಡಿಸುವ ಯಾವುದೇ ಉದ್ದೇಶವಿರಲಿಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group