ಕಾಂಗ್ರೆಸ್, ಜೆಡಿಎಸ್ ನವರಿಗೆ ಇಂದು ನಾಮದ ಮಹತ್ವ ತಿಳಿಯಿತು – ಶಾಸಕ ಅಂಗಾರ

May 23, 2019
10:40 PM

ಸುಳ್ಯ: ಬಿಜೆಪಿಯವರು ನಾಮ ಹಾಕುತ್ತಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ನಾಮವನ್ನು ಗೇಲಿ ಮಾಡುತ್ತಿದ್ದರು. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನವರಿಗೆ ಜನರೇ ನಾಮ ಹಾಕಿದ್ದಾರೆ. ಅವರಿಗೆ ಇಂದು ನಾಮದ ಮಹತ್ವ ತಿಳಿದಿರಬಹುದು ಎಂದು ಶಾಸಕ ಅಂಗಾರ ಹೇಳಿದ್ದಾರೆ.

Advertisement
Advertisement

ಲೋಕಸಭಾ ಚುನಾವಣೆ ಗೆಲುವಿನ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಐತಿಹಾಸಿಕ ಗೆಲುವು. ನರೇಂದ್ರ ಮೋದಿಯವರ ದೇಶ ಭಕ್ತಿ, ಜನಪರ ಆಡಳಿತ ಜನರಿಗೆ ಅರ್ಥ ಆಗಿದೆ ಎಂದು ಅವರು ಹೇಳಿದರು.

ನ.ಪಂ.ಗೆಲುವು ಕಾಂಗ್ರೆಸ್ ಕನಸು- ಕಂಜಿಪಿಲಿ

ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಲೋಕಸಭಾ ಚುನಾವಣೆಯ ಗೆಲುವು ಸುಳ್ಯ ನಗರ ಪಂಚಾಯತ್ ಚುನಾವಣೆಗೆ ದಿಕ್ಸೂಚಿ. ಈ ಗೆಲುವಿನ ಪ್ರೇರಣೆಯಿಂದ ನ.ಪಂ.ನ 20 ವಾರ್ಡ್ ಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದರು. ನಗರ ಪಂಚಾಯತ್ ಗೆಲ್ಲುವುದಾಗಿ ಕೆಲವು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಕನಸು ಮಾತ್ರ ಎಂದು ಕುಟುಕಿದರು.

ಎ.ವಿ.ತೀರ್ಥರಾಮ ಮಾತನಾಡಿದರು. ವಿನಯಕುಮಾರ್ ಕಂದಡ್ಕ, ನವೀನ್ ರೈ ಮೇನಾಲ, ಉದಯಕುಮಾರ್ ಆಚಾರ್, ಪಿ.ಕೆ.ಉಮೇಶ್, ದಾಮೋದರ ಮಂಚಿ, ಅಬ್ದುಲ್ ಕುಂಞಿ ನೇಲ್ಯಡ್ಕ, ವಿನುತಾ ಪಾತಿಕಲ್ಲು, ನವೀನ್ ಸಾರಕೆರೆ, ಶಂಕರ ಪೆರಾಜೆ, ಶೀನಪ್ಪ ಬಯಂಬು, ಸಂಜಯಕುಮಾರ್ ಪೈಚಾರ್, ಗಿರೀಶ್ ಕಲ್ಲುಗದ್ದೆ ಉಪಸ್ಥಿತರಿದ್ದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ
May 2, 2025
8:59 PM
by: ದ ರೂರಲ್ ಮಿರರ್.ಕಾಂ
ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group