ಕಾಡಿಗೆ “ಡಾಮರು” ಸುರಿತಾರಾ…..! ವ್ಯವಸ್ಥೆ ನೋಡಿದರೆ ನಿಮಗೇ ಅಚ್ಚರಿಯಾಗುತ್ತದೆ…….!

May 25, 2019
9:59 AM

ಸುಳ್ಯ: ರಸ್ತೆಗೆ  ಡಾಮರು ಹಾಕುವುದು , ಕಾಡಿಗೆ ಡಾಮರು ಸುರಿಯುವುದು…!.

ಇದೊಂದು ಅಚ್ಚರಿ ಹಾಗೂ ಪ್ರಶ್ನಾರ್ಹ ಸಂಗತಿ. ಆದರೆ ಈ ಬಗ್ಗೆ ಮಾತನಾಡುವವರು, ಪ್ರಶ್ನೆ ಮಾಡುವವರು ಯಾರು ?. ಅಧಿಕಾರಿಗಳು ನೋಡ್ತಾರಾ , ಇಲಾಖೆಗಳು ಬರ್ತಾವಾ ? ಜನಪ್ರತಿನಿಧಿಗಳು ಕೇಳ್ತಾರಾ ? ಜನರು ಮಾತಾಡ್ತಾರಾ ?

ಹೌದು, ಸುಮಾರು ಒಂದು ಪಿಕ್ ಅಪ್ ನಲ್ಲಿ ಹಿಡಿಯಬಹುದಾದಷ್ಟು ಜಲ್ಲಿ ಮಿಶ್ರಣ ಮಾಡಿರುವ ಡಾಮರು ಕಾಡಿನಲ್ಲಿ ಸುರಿಯಲಾಗಿದೆ. ಜನ   ಓಡಾಟ ವಿರಳ ಇರುವ ಪ್ರದೇಶದವಲ್ಲಿ ಈ ಡಾಮರು ಸುರಿಯಲಾಗಿದೆ. ಹಾಗಿದ್ದರೆ ಎಲ್ಲಿ  ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

 

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ದೈವಸ್ಥಾನದ ಬಳಿಯ ಮೊಗ್ರ ಭಜನಾ ಮಂದಿರದಿಂದ ಕೊಂಚ ದೂರದಲ್ಲಿ  ರಬ್ಬರ್ ತೋಟವೊಂದರ ಬಳಿಯ ಕಿರಾಲ್ ಬೋಗಿ ಮರದ ಪಕ್ಕ ಮಿಕ್ಸ್ ಮಾಡಿರುವ ಡಾಮರು  ಸುರಿಯಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಮೊಗ್ರ -ಏರಣಗುಡ್ಡೆ -ಎಡೋಣಿ ರಸ್ತೆಗೆ ಡಾಮರು ಹಾಕಲಾಗಿತ್ತು. ಇದಕ್ಕೆ ಈ ಬಾರಿ ಅಲ್ಲಲ್ಲಿ ತೇಪೆ ಮಾಡುತ್ತಾ ಬರಲಾಗಿತ್ತು. ಕೊನೆಗೆ ಉಳಿದ ಡಾಮರು ಇಲ್ಲಿ  ಸುರಿಯಲಾಗಿದೆಯೇ ಎಂಬ ಸಂದೇಹ ಇಲ್ಲಿ ಮೂಡಿದೆ.

 

ಇಲ್ಲಿರುವ ಪ್ರಶ್ನೆ ಇದಲ್ಲ. ಇದು ಗುತ್ತಿಗೆದಾರ ಹಣವೇ ಆಗಿರಬಹುದು, ಆದರೆ ಅದು ಸರಕಾರದಿಂದ ಮಂಜೂರಾಗುವ ಹಣ. ಜನರ ತೆರಿಗೆಯ ಹಣ. ಅದನ್ನು ಹೀಗೆ ಎಸೆದು ಹೋಗುವದು ಎಷ್ಟು ಸರಿ. ಮೊಗ್ರ -ಏರಣಗುಡ್ಡೆ -ಎಡೋಣಿ ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳಿಂದ ಒತ್ತಾಯ ಕೇಳಿಬರುತ್ತಿದೆ. ಅಲ್ಲಲ್ಲಿ  ಹೊಂಡಗಳು ಇವೆ.  ಒಂದು ಸೇತುವೆಗೆ ಹಲವು ವರ್ಷಗಳಿಂದ ಬೇಡಿಕೆ ಇದೆ.  ಇದೇ ರಸ್ತೆಯಲ್ಲಿ ಈಗಲೂ ಕೆಲವು ಕಡೆ ಹೊಂಡಗಳು ಇವೆ. ಕನಿಷ್ಠ ಇಲ್ಲಿಗಾದರೂ ಈ ಡಾಮರು ಹಾಕಬಹುದಾಗಿತ್ತು ಎಂಬುದು ಜನರ ಒತ್ತಾಯ. ಅದೂ ಅಲ್ಲದೆ ಇದೇ ರಸ್ತೆಯನ್ನು  ಕಾಂಕ್ರೀಟ್ ರಸ್ತೆ ಮೂಲಕ ಅಭಿವೃದ್ಧಿ ಮಾಡಲಾಗಿದೆ. ಅದರ ಆರಂಭಕ್ಕೆ ಡಾಮರು ಹಾಕಬಹುದಾಗಿತ್ತು. ಅವಕಾಶಗಳು ಸಾಕಷ್ಟು ಇತ್ತು. ಅದಿಲ್ಲದೆ ಹೀಗೆ ರಸ್ತೆ ಬದಿಯ ಕಾಡಿಗೆ ಎಸೆದು ಹೋಗುವುದು  ಎಷ್ಟು ಸರಿ ಎಂಬ ಪ್ರಶ್ನೆ ಈಗ ಜನರು ಕೇಳುತ್ತಾರೆ. ಯಾವ ಜನಪ್ರತಿನಿಧಿ ಈ ಬಗ್ಗೆ ಮಾತನಾಡುತ್ತಾರೆ ? ಯಾವ ಅಧಿಕಾರಿ ಇಂತಹವರ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ? ಯಾರು ಚೌಕೀದಾರ್ ಆಗುತ್ತಾರೆ ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಎಚ್ಚರಿಕೆ: ಜಾನುವಾರು–ಕೋಳಿಗಳಲ್ಲಿ ಉಷ್ಣ ಒತ್ತಡ ಹೆಚ್ಚಳ, ರೈತರಿಗೆ ಮಾರ್ಗಸೂಚಿ ಪ್ರಕಟ
March 21, 2026
10:06 PM
by: ಮಿರರ್‌ ಡೆಸ್ಕ್
ʼಕೊಕೊ ಕ್ರೀಂ’ ಗೆ ಬೇಡಿಕೆ…! ಇದು ರೈತನ ಇನೋವೇಶನ್ – ಇಲ್ಲಿ ಡೈರಿ ಇಲ್ಲ… ಕೆಮಿಕಲ್ ಇಲ್ಲ…ತೆಂಗಿನ ಹಾಲು ಮಾತ್ರಾ..!
March 21, 2026
7:41 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror