ಕಾಣಿಯೂರು ಶ್ರೀಅಮ್ಮನವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೈಲ್ವೆ ಇಲಾಖೆಯಿಂದ ತಡೆ

November 16, 2019
1:16 PM

ಕಾಣಿಯೂರು: ಪುರಾತನ ಕಾಲದಿಂದಲೂ ಕಾಣಿಯೂರಿನಲ್ಲಿ ನೆಲೆಯಾಗಿರುವ ಇತಿಹಾಸ ಪ್ರಸಿದ್ಧ ಶ್ರೀ ಅಮ್ಮನವರ ದೇವಸ್ಥಾನವು ಜೀರ್ಣೋದ್ಧಾರಗೊಳ್ಳುತ್ತಿದ್ದು, ಇದೀಗ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಗಳಿಗೆ ರೈಲ್ವೆ ಇಲಾಖೆಯಿಂದ ತಡೆಯೊಡ್ಡಲಾಗಿದೆ.

ಈ ಹಿನ್ನಲೆಯಲ್ಲಿ ಕಾಣಿಯೂರು ರಾಮತೀರ್ಥ ಮಠದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಭಕ್ತರ ಸಮಾಲೋಚನಾ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರು, ಈಗಾಗಲೇ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳನ್ನು ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಸಂಪರ್ಕಿಸಲಾಗಿದೆ. ದೇವಸ್ಥಾನದ ನವೀಕರಣದ ದೃಷ್ಠಿಯಿಂದ ಎಲ್ಲರೂ ಕೈ ಜೋಡಿಸಬೇಕು ಎಂದರು.

ಕಾಣಿಯೂರು ರಾಮತೀರ್ಥಮಠದ ವ್ಯವಸ್ಥಾಪಕ ನಿರಂಜನ್ ಆಚಾರ್ ಮಾತನಾಡಿ, ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ರೈಲ್ವೆ ಇಲಾಖೆಯಿಂದ ತಾತ್ಕಾಲಿಕ ತಡೆಯೊಡಿದ್ದಾರೆ. ಈಗಾಗಲೇ ರೈಲ್ವೆ ಅಧಿಕಾರಿಯವರನ್ನು ಸಂಪರ್ಕಿಸಲಾಗಿದೆ. ಮೇಲಾಧಿಕಾರಿಯವರ ಗಮನಕ್ಕೆ ತರಲು ಹೇಳಿದ್ದಾರೆ. ಮುಂದಿನ ದಿನಗಳಲ್ಲಿಯೂ ಈ ಸ್ಥಳದಲ್ಲಿಯೇ ದೇವಸ್ಥಾನ ನಿರ್ಮಾಣಗೊಳ್ಳಲು ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಗ್ರಾ.ಪಂ ಸದಸ್ಯ ಗಣೇಶ್ ಉದುನಡ್ಕ, ಅರ್ಚಕರಾದ ಸುಬ್ರಹ್ಮಣ್ಯ ಉಪಾಧ್ಯಾಯ ಬೊಬ್ಬೆಕೇರಿ, ಕಾಣಿಯೂರು ಶ್ರೀ ಮಠದ ಅರ್ಚಕ ಬಾಲಕೃಷ್ಣ ಅಸ್ರಣ್ಣ, ಪ್ರಶಾಂತ್ ಭಟ್ ಕಟ್ಟತ್ತಾರು, ಪದ್ಮಯ್ಯ ಗೌಡ ಅನಿಲ, ಹರಿಪ್ರಸಾದ್ ರೈ ಕಾಣಿಯೂರು, ರಾಮಣ್ಣ ಗೌಡ ಮುಗರಂಜ ಅವರು ಸಲಹೆ ನೀಡಿದರು.

ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೈಲ್ವೆ ಇಲಾಖೆಯಿಂದ ತಾತ್ಕಾಲಿಕ ತಡೆಯೊಡ್ಡಲಾದ ಹಿನ್ನಲೆಯಲ್ಲಿ ರೈಲ್ವೆ ಸಚಿವರನ್ನು, ಸಂಸದರನ್ನು ಭೇಟಿಯಾಗುವುದೆಂದು ನಿರ್ಧರಿಸಲಾಯಿತು.

ವಿಶೇಷ ಪ್ರಾರ್ಥನೆ: ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಶೀಘ್ರದಲ್ಲಿ ನಡೆದು ಶ್ರೀ ದೇವರ ಪ್ರತಿಷ್ಠಾ ಕಾರ್ಯಕ್ರಮವು ನೆರವೇರುವ ನಿಟ್ಟಿನಲ್ಲಿ ಕಾಣಿಯೂರು ಶ್ರೀ ಮಠ ಹಾಗೂ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಸ್ವಾಮೀಜಿಯವರ ಸಮ್ಮುಖದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror