ಕಾರ್ಮಿಕರ ಪ್ರತಿಭಟನೆಗೆ ಸುಳ್ಯದಿಂದಲೂ ಭಾಗಿ

September 14, 2019
9:59 AM

ಸುಳ್ಯ: ಸೆ. 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಮಿಕರ ಬ್ರಹತ್ ಪ್ರತಿಭಟನೆಯಲ್ಲಿ ಸುಳ್ಯದಿಂದಲೂ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಸಿಐಟಿಯು ಮುಖಂಡರು ತಿಳಿಸಿದ್ದಾರೆ. ಕೇಂದ್ರ ಸರಕಾರ ರದ್ದು ಮಾಡಿರುವ 44 ಕಾರ್ಮಿಕ ಪರವಾದ ಕಾನೂನುಗಳನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.

ಕಟ್ಟಡ ನಿರ್ಮಾಣವಲಯದಲ್ಲಿನ ಉದ್ಯೋಗ ಸೃಷ್ಠಿಯು ತೀರಾ ಕುಸಿದಿದ್ದು ಕಾರ್ಮಿಕರು ಒಪ್ಪೊತ್ತಿನ ಅನ್ನಕ್ಕೂ ಕಷ್ಟಪಡುತ್ತಿದ್ದಾರೆ. ನಾಳೆಯ ದುಡಿಮೆಯನ್ನು ನಂಬಿಕೊಂಡು ವಿವಿಧ ಹಣಕಾಸು ಸಂಸ್ಥೆಗಳಿಂದ ಮಾಡಿದ ಸಾಲ ಅವರ ಜೀವದ ಮೇಲೇಯೇ ತೂಗುಗತ್ತಿಯಂತೆ ನೇತಾಡುತ್ತಿದೆ. ಇಂಜಿನಿಯರಿಂಗ್ ಆದ ಲಕ್ಷಾಂತರ ಯುವಕರು ಇವತ್ತು ಭವಿಷ್ಯದ ದಾರಿ ಕಾಣದೆ ಸಂಕಷ್ಟದಲ್ಲಿದ್ದಾರೆ. ಅವರಿಗೆ ಉದ್ಯೋಗ ಸಿಕ್ಕಿ ಮಕ್ಕಳ ಮತ್ತು ತಮ್ಮ ಭವಿಷ್ಯದ ಕನಸು ಕಾಣುತ್ತಿದ್ದ ಹೆತ್ತವರಿಗೆ ಕೇಂದ್ರ ಸರಕಾರದ ಆರ್ಥಿಕ ನೀತಿ ಬರಸಿಡಿಲಿನಂತೆ ಬಂದೆರಗಿದೆ. ಆದ್ದರಿಂದ ದೇಶದಲ್ಲಿ ಅತೀಹೆಚ್ಚು ಉದ್ಯೋಗ ಸ್ರಷ್ಟಿಸಲ್ಪಡುವ ನಿರ್ಮಾಣವಲಯದ ಉತ್ತೇಜನಕ್ಕೆ ಮತ್ತು ಕಾರ್ಮಿಕರ ಬದುಕನ್ನು ರಕ್ಷಿಸಲು ಒತ್ತಾಯಿಸಿ ಬೆಂಗಳೂರಿನ ಸಿಟಿ ರೈಲ್ವೇ ನಿಲ್ದಾಣದಿಂದ ಮೆರವಣಿಗೆ ಸಾಗಿ ಫ್ರೀಡಂ ಪಾರ್ಕಿನಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಪ್ರತಿಭಟನಾ ಪ್ರದರ್ಶನಕ್ಕೆ ಸಿಐಟಿಯು ವಿನೊಂದಿಗೆ ದೇಶದ ಉಳಿದ ಕಾರ್ಮಿಕ ಪರ ಟ್ರೇಡ್ ಯೂನಿಯನ್ ಗಳಾದ ಇಂಟೆಕ್ ,ಎಐಟಿಯೂಸಿ, ಎನ್.ಸಿ.ಎಲ್. ಹೆಚ್.ಎಂ.ಎಸ್ ಕೂಡಾ ಸಹಕಾರ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror