ಪುತ್ತೂರು: ಪೆರ್ಲಂಪಾಡಿ ಕಡೆ ಹೋಗುತ್ತಿದ್ದ ಓಮ್ನಿಗೆ ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಫೆ.23ರಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು, ಓರ್ವರು ಮೃತಪಟ್ಟಿದ್ದಾರೆ.
ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರುತಿ ಓಮ್ನಿ ಚಲಾಯಿಸುತ್ತಿದ್ದ ಕೊಡಿಪ್ಪಾಡಿ ನಾರಾಯಣ ಜೋಯಿಷ ಅವರು ಮೃತಪಟ್ಟ ದುರ್ದೈವಿ. ನಾರಾಯಣ ಜೋಯಿಷ ಅವರು ಪೆರ್ಲಂಪಾಡಿ ತರವಾಡು ಮನೆಯಲ್ಲಿ ಕಾರ್ಯಕ್ರಮ ನಿಮಿತ್ತ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ತಕ್ಷಣ ಓಮ್ನಿಯ ಹಿಂದೆ ಕಾರಿನಲ್ಲಿ ಬರುತ್ತಿದ್ದ ನಾರಾಯಣ ಜೋಯಿಷ ಅವರ ಪುತ್ರ, ಸಂಬಂಧಿಕರು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel