ಕುಕ್ಕೆಯ ಬ್ರಹ್ಮ ರಥದ ಮೇಲೆ ಸ್ವಾಮೀಜಿ ಏರಿದ್ದು ಈಗ ಇನ್ನೊಂದು ವಿವಾದ……!

November 13, 2019
7:07 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೇಲೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಏರಿದ್ದು ಈಗ ಇನ್ನೊಂದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಹತ್ತು ಸಮಸ್ತರು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದೆ.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಮೀಪದ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಕಳೆದ ಕೆಲವು ಸಮಯಗಳಿಂದ ವಿವಾದಗಳು, ದೂರು-ಪ್ರತಿದೂರು ನಡೆಯುತ್ತಿತ್ತು. ಸರ್ಪಸಂಸ್ಕಾರದಿಂದ ಆರಂಭಗೊಂಡ ವಿವಾದ ತಣ್ಣಗಾಗಲಿಲ್ಲ. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಡೆಯಬೇಕಾದ ಸರ್ಪಸಂಸ್ಕಾರ ಸೇವೆಯು ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಕೂಡಾ ನಡೆಯುತ್ತಿರುವುದರ ಬಗ್ಗೆ ಚರ್ಚೆ ಆರಂಭವಾಗಿ ದೂರು-ಪ್ರತಿದೂರು ನಡೆದ ಬಳಿಕ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಅಲ್ಲೂ ಅಂತಿಮ ನಿರ್ಧಾರವಾಗದೆ ಮಂಗಳೂರಿನಲ್ಲಿ  ಸಭೆ ನಡೆಸಿ ಇತ್ಯರ್ಥ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು. ಹಾಗಿದ್ದರೂ ವಿವಾದ ತಣ್ಣಗಾಗಲಿಲ್ಲ. ಬೇರೆ ಬೇರೆ ಸಂಗತಿಗಳಲ್ಲಿ  ವಿವಾದ ನಡೆಯುತ್ತಲೇ ಇತ್ತು. ಇದೀಗ ಮತ್ತೊಂದು ವಿವಾದ ಎದ್ದಿದೆ.

ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥವು ಅದ್ದೂರಿಯಾಗಿ ಕುಕ್ಕೆ ತಲಪಿದ ಬಳಿಕ ಇದೀಗ ಧಾರ್ಮಿಕ, ವೈದಿಕ ವಿಧಿವಿಧಾನಗಳು ನಡೆಯುತ್ತಿದೆ. ಈ ಸಂದರ್ಭ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ರಥ ಏರಿರುವುದು  ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಹತ್ತು ಸಮಸ್ತರು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದೆ.

ಶ್ರೀ ದೇವಳದ ಬ್ರಹ್ಮರಥಕ್ಕೆ ತನ್ನದೇ ಆದ ಘನತೆ , ಗೌರವ ಇದೆ. ಬ್ರಹ್ಮರಥಕ್ಕೆ ಶ್ರೀ ದೇವರನ್ನು ಹೊರುವ ಅರ್ಚಕರು, ತಂತ್ರಿಗಳು ಮಾತ್ರಾ ಏರಬೇಕು ವಿನಹ ಬೇರೆ ಯಾರೂ ಹತ್ತುವಂತಿಲ್ಲ ಹೀಗಿರುವಾಗ ಸಂಪುಟ ನರಸಿಂಹನ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥರು ನೂತನ ಬ್ರಹ್ಮರಥ ಏರಿದ್ದಾರೆ. ಅಲ್ಲದೆ ಮಠಕ್ಕೆ ದೇವಸ್ಥಾನದಲ್ಲಿ  ಪೂಜಾ ಕಾರ್ಯದಲ್ಲಿ , ವಿಧಿವಿಧಾನದಲ್ಲಿ ಯಾವುದೇ ಹಕ್ಕಿಲ್ಲ. 1886 ರ ತೀರ್ಪಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಿ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಯಾವುದೇ ರೀತಿಯ ಹಕ್ಕಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಅಲ್ಲದೆ ಪ್ರತ್ಯೇಕ ಪೂಜಾ ವಿಧಿವಿಧಾನಗಳನ್ನು ಮಾಡಿಕೊಂಡು ಬರಲಾಗುತ್ತದೆ. ಹೀಗಾಗಿ ಈಗ ರಥ ಏರಿರುವುದು ಶಿಷ್ಟಾಚಾರ ಉಲ್ಲಂಘನೆ ಇದಾಗಿದೆ. ಆದ್ದರಿಂದ ರಥಕ್ಕೆ ಹತ್ತಲು ಅವಕಾಶ ಮಾಡಿಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹದ್ದಕ್ಕೆ  ಅವಕಾಶ ನೀಡಬಾರದು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕ ಹತ್ತು ಸಮಸ್ತ ದೂರಿನಲ್ಲಿ ತಿಳಿಸಲಾಗಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror