ಕೃಷಿ ನೀರಿನ ತೊಟ್ಟಿಯಲ್ಲಿ ಯಶಸ್ಸು ಕಂಡ ಬಳ್ಪದ ಕೃಷಿಕ

September 8, 2019
3:00 PM

ಬಳ್ಪ: ಕೃಷಿ ನೀರಿನ ತೊಟ್ಟಿಯಿಂದ ಕೃಷಿ ಭೂಮಿಯಲ್ಲಿ ಯಶಸ್ಸು ಕಂಡ ಕೃಷಿಕ ಬಳ್ಪ ಗ್ರಾಮದ ಪಠೋಳಿ ಕೃಷ್ಣ ಭಟ್. ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಯೋಜನೆಯಡಿ ಸುಳ್ಯ ತಾಲೂಕಿನ ಬಳ್ಪ ನಿವಾಸಿ ಪಿ. ಕೃಷ್ಣ ಭಟ್ ಇವರು ನೀರಾವರಿ ಬಗ್ಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಇಲಾಖಾ ಅಧಿಕಾರಿಗಳು ಇಲಾಖೆಯ ಸಹಾಯಧನದ ಮೂಲಕ ನೀರು ಸಂಗ್ರಹಣಾ ತೊಟ್ಟಿ ರಚನೆ ಮಾಡಿ ಬೇಸಿಗೆ ಕಾಲದಲ್ಲಿ ಕೃಷಿ ಭೂಮಿಯನ್ನು ಸುಸ್ಥಿತಿಯಲ್ಲಿ ಇಡಬಹುದೆಂಬ ಮಾಹಿತಿಯನ್ನು ನೀಡಿದರು.

Advertisement
Advertisement

ಅವರು ಇಲಾಖಾ ಮಾರ್ಗಸೂಚಿ ಅನ್ವಯ ಸುಮಾರು 20 * 20 * 3 ಮೀಟರ್ ಅಳತೆಯಲ್ಲಿ ಕೃಷಿ ಹೊಂಡ ಮಾಡಿ ಪ್ಲಾಸ್ಟಿಕ್ ಹೊದಿಕೆ ಹಾಕಿ ನೀರು ಸಂಗ್ರಹಣಾ ತೊಟ್ಟಿ ರಚಿಸಿದರು. ಇದಕ್ಕೆ ಶೇ. 50ರ ಸಹಾಯಧನದಂತೆ ರೂ. 67,094.00 ಗಳನ್ನು ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಹಾಯಧನವಾಗಿ ನೀಡಲಾಯಿತು. ಇಲಾಖಾ ವತಿಯಿಂದ ಅವರಿಗೆ ಆರ್ಥಿಕ ನೆರವು ದೊರೆಯಿತು.

ಸರಕಾರ ನೀಡಿರುವ ಸಹಾಯಧನ ಮತ್ತು ಸ್ವಂತದ ಒಂದಿಷ್ಟು ಹಣ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದೇನೆ. 2018-19 ನೇ ಸಾಲಿನ ಬೇಸಿಗೆ (ಏಪ್ರಿಲ್-ಮೇ) ಯಲ್ಲಿ ಸುಳ್ಯ ತಾಲೂಕಿನಾದ್ಯಂತ ಬರದ ಪರಿಸ್ಥಿತಿ ಮೂಡಿದಾಗ ಸಹಾಯಧನದಡಿ ನಿರ್ಮಿಸಿದ ನೀರು ಸಂಗ್ರಹಣಾ ತೊಟ್ಟಿಯಲ್ಲಿ ಸಾಕಷ್ಟು ನೀರಿನ ಲಭ್ಯತೆ ಇದ್ದ ಕಾರಣ ಬರದ ನಡುವೆಯೂ ಎರಡರಿಂದ ಮೂರು ಸಲ ತೋಟಕ್ಕೆ ನೀರು ಕೊಡಲು ಸಾಧ್ಯವಾಯಿತು. ಹಾಗಾಗಿ ಅಡಿಕೆ ಮತ್ತು ಕಾಳುಮೆಣಸು ತೋಟವು ಬರದ ನಡುವೆಯೇ ಹಸಿರುಮಯವಾಗಿ ಕಂಗೊಳಿಸುತ್ತಾ ಹೆಚ್ಚಿನ ಬೆಳವಣಿಗೆಯ ಆಶಾಭಾವನೆ ಮೂಡಿಸಿದೆ. ಈ ವರ್ಷದಲ್ಲಿ 30-50% ಅಧಿಕ ಇಳುವರಿ ಪಡೆಯಬಹುದೆಂದು ಆಶಾಭಾವನೆ ಮೂಡಿದೆ” ಎಂದು ಕೃಷ್ಣ ಭಟ್‍ರವರು ತಮ್ಮ ಅಭಿಪ್ರಾಯ ತಿಳಿಸಿರುತ್ತಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹೇಳುತ್ತಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group