ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ಪ್ರಥಮ ಆಂಗ್ಲ ಭಾಷೆ ಐಚ್ಚಿಕ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಮಾತನಾಡಿದರು. ಆಂಗ್ಲಭಾಷೆಗೆ ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆ ಇದೆ. ಇಂಗ್ಲಿಷ್ ಮಾಧ್ಯಮ ಇಂದು ಸಾರ್ವತ್ರಿಕವಾಗುತ್ತಿದೆ. ಆಂಗ್ಲಭಾಷೆಗೆ ಜತೆಗೆ ಇತರೆ ಬಾಷೆಗಳನ್ನು ಪ್ರೀತಿಸಿ ಒಡನಾಟ ಹೊಂದಿರಬೇಕು ಎಂದರು.
ವೇದಿಕೆಯಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ. ಗೋವಿಂದ ಎನ್ ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಂತಿಮ ಐಚ್ಚಿಕ ವಿದ್ಯಾರ್ಥಿಗಳು ಆಯೋಜಿಸಿದ್ದರು. ಈ ವೇಳೆ ಸಸಿಗಳನ್ನು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯಾಗಿ ನೀಡಲಾಯಿತು. ಅಕ್ಷತಾ ಪಿ.ಕೆ ವಂದಿಸಿದರು. ಯೋಗಿತ ಕಾರ್ಯಕ್ರಮ ನಿರ್ವಹಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel