ಕೆ.ವಿ.ಜಿ.ಐ.ಪಿ.ಎಸ್ ನಲ್ಲಿ ಸಂಭ್ರಮದ ಶಾಲಾ ವಾರ್ಷಿಕ ಕ್ರೀಡೋತ್ಸವ

December 9, 2019
9:53 PM

ಸುಳ್ಯ: ಸುಳ್ಯದ ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಜರುಗಿತು.

ಕೆ.ವಿ.ಜಿ.ದಂತ ಮಹಾವಿದ್ಯಾಲಯದ ಪೀರಿಯೋಡಾಂಟ್ರಿಕ್ ವಿಭಾಗ ಮುಖ್ಯಸ್ಥ ಡಾ.ದಯಾಕರ.ಎಂ.ಎಂ ಉದ್ಘಾಟಿಸಿದರು. ಕೆ.ವಿ.ಜಿ.ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ಡಾ.ಯಶೋದಾ ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಪ್ರಾಪ್ತಿ ಮತ್ತು ಆಶಯ ಪ್ರಾರ್ಥನೆಗೈದರು. ಶಾಲಾ ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ.ಎಲ್ಲರನ್ನೂ ಸ್ವಾಗತಿಸಿದರು. ಆಕರ್ಷಕ ಪಥ ಸಂಚಲನದೊಂದಿಗೆ ಕ್ರೀಡಾ ಜ್ಯೋತಿಯನ್ನು ಬೆಳಗಿಸಲಾಯಿತು. ಲಕ್ಷ್ಮೀ ಲಾವಣ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.

ಕೆ.ವಿ.ಜಿ.ಐ.ಟಿ.ಐ ನ ಪ್ರಾಚಾರ್ಯ ಚಿದಾನಂದ ಬಾಳಿಲ, ಡೆಂಟಲ್ ಕಾಲೇಜಿನ ಆಡಳಿತಾಧಿಕಾರಿ ಬಿ.ಟಿ.ಮಾಧವ ಉಪಸ್ಥಿತರಿದ್ದರು. ಉಪ ಪ್ರಾಚಾರ್ಯರಾದ ಶಿಲ್ಪಾ ಬಿದ್ದಪ್ಪ ಹಾಗೂ ನಯನಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಚಿಣ್ಣರಿಂದ ಆಕರ್ಷಕ ಏರೋಬಿಕ್ಸ್ ನೃತ್ಯ ಮೂಡಿಬಂತು. ಶಾಲೆಯ ನಾಲ್ಕು ತಂಡಗಳಾದ ಯೆಲ್ಲೋ ಡೈಮಂಡ್, ಬ್ಲೂ ಸಫೈರ್, ಗ್ರೀನ್ ಎಮರಾಲ್ಡ್ ಹಾಗೂ ರೆಡ್ ರೂಬಿ ಇವುಗಳ ನಡುವೆ ನಡೆದ ಪೈಪೋಟಿಯಲ್ಲಿ ಬ್ಲೂ ಸಫೈರ್ ಪ್ರಥಮ ಸ್ಥಾನ ಗಳಿಸಿ ಯೆಲ್ಲೋ ಡೈಮಂಡ್ ಎರಡನೇ ಸ್ಥಾನ ಪಡೆದುಕೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror