ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯ: ಪದಾಧಿಕಾರಿಗಳ ಪದಗ್ರಹಣ ಮತ್ತು ಸ್ವಾಗತ ಕಾರ್ಯಕ್ರಮ

October 20, 2019
10:00 AM

ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು  2019-20 ನೇ ಸಾಲಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ಆಸೋಸಿಯೇಶನ್ ಇದರ ಪದಾಧಿಕಾರಿಗಳ ಪದಗ್ರಹಣ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಅಡಿಟೋರಿಯಂನಲ್ಲಿ ಹಮ್ಮಿಕೊಂಡಿತು.

ಮುಖ್ಯ ಅತಿಥಿಗಳಾಗಿ  ಆಗಮಿಸಿದ  ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇದರ ಪ್ರಾಂಶುಪಾಲರಾದ ಸೀತಾರಾಮ ಕೇವಳ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ “ಇನ್ವೋಲ್ವ್ ಟು ಇವೋಲ್ವ್” ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಎ. ಜ್ಞಾನೇಶ್‍ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಸ್ತು, ಗುಣನಡತೆಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಕಾರ್ಯಕ್ಷಮತೆಯು ಉನ್ನತಮಟ್ಟದಲ್ಲಿರಬೇಕೆಂದು ಕಿವಿಮಾತು ಹೇಳಿದರು.

ವಿಭಾಗದ ಮುಖ್ಯಸ್ಥ ಹಾಗೂ ಅಸೊಸಿಯೇಶನ್‍ನ ಅಧ್ಯಕ್ಷರಾದ ಡಾ. ರವಿಕುಮಾರ್ ಎಂ.ಎಸ್. ಪ್ರಾಸ್ತಾವಿಕ ಭಾಷಣ ಮಾಡಿದರು. ಅಸೋಸಿಯೇಶನ್‍ನ ಸಂಯೋಜಕರಾದ ವಿಭಾಗದ ಪ್ರಾಧ್ಯಾಪಕರುಗಳಾದ ಅಶ್ವಿನಿ ಪಿ. ಮತ್ತು ತೃಪ್ತಿ ಪಿ. ಅತಿಥಿಗಳನ್ನು ಸ್ವಾಗತಿಸಿ, ಅಸೊಸಿಯೇಶನ್‍ನ ಕಾರ್ಯದರ್ಶಿ ಪೂಜ ಹೆಚ್. 2019-20 ನೇ ಸಾಲಿನಲ್ಲಿ ನಡೆದ ವಿಭಾಗದ ವರದಿಯನ್ನು ಸಭೆಗೆ ಮಂಡಿಸಿದರು. ಮಹಿಳಾ ವಿಭಾಗದ ಅಸೊಸಿಯೇಶನ್‍ನ ಕಾರ್ಯದರ್ಶಿ ಅನನ್ಯ ಪದಾಧಿಕಾರಿಗಳನ್ನು ಪರಿಚಯಿಸಿದರು. ಅಸೊಸಿಯೇಶನ್‍ನ ಉಪಾಧ್ಯಕ್ಷರಾದ ಅಭಿಶೇಕ್ ಬಿ.ಎಲ್. ವಂದಿಸಿದರು. ಮೈತ್ರಿ ಮತ್ತು ಮಾಳವಿಕ ಪ್ರಾರ್ಥಿಸಿ, ಸಿಂಚನ ಎ. ಮತ್ತು ಮಸಾಲಿ ಗಿರೀಶ್ ಬಸವರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.

ವಿಭಾಗದ ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳನ್ನು ಈ ವಿಭಾಗಕ್ಕೆ ಆದರದಿಂದ ಬರಮಾಡಿಕೊಂಡು ವಿವಿಧ ವಿನೋದಾವಳಿ ಕಾರ್ಯಕ್ರಮಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 22, 2025
7:04 PM
by: ದ ರೂರಲ್ ಮಿರರ್.ಕಾಂ
ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಇಂದಿನಿಂದ ‘ನವರಾತ್ರ ನಮಸ್ಯಾ’ | ವೈಭವದೊಂದಿಗೆ ಸಂಪನ್ನವಾದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ
September 22, 2025
7:26 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-09-2025 | ಸೆ.29 ರವರೆಗೆ ಅಲ್ಲಲ್ಲಿ ಮಳೆ ನಿರೀಕ್ಷೆ | ವಾಯುಭಾರ ಕುಸಿತದ ಪರಿಣಾಮ ಏನು..?
September 21, 2025
9:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group