ಕೆಂಪುಕಲ್ಲು ಕೋರೆ ಕಾನೂನು ಸರಳೀಕರಣಕ್ಕೆ ಮನವಿ

September 11, 2019
11:00 AM

ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು  ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.

Advertisement

ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ  ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group