ಕೆಂಪುಕಲ್ಲು ಕೋರೆ ಕಾನೂನು ಸರಳೀಕರಣಕ್ಕೆ ಮನವಿ

September 11, 2019
11:00 AM

ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು  ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.

ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ  ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್
ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ
April 19, 2026
7:29 AM
by: ಮಿರರ್‌ ಡೆಸ್ಕ್
ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror