ಕೆಎಸ್‍ಎಸ್ ಕಾಲೇಜು ಕುಸುಮಸಾರಂಗದ ರಂಗ ಶಿಕ್ಷಣ ಶಿಬಿದ ಸಮಾರೋಪ

July 9, 2019
12:00 PM

ಸುಬ್ರಹ್ಮಣ್ಯ : ಪಠ್ಯದಲ್ಲಿ ಕಲಿಸಲಾಗದ ಶಿಕ್ಷಣವನ್ನು ಪಾಠವನ್ನು ರಂಗಭೂಮಿ ಕಲಿಸುತ್ತದೆ. ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಲು ಪಠ್ಯೇತರ ಚಟುವಟಿಯೇ ಮಾನದಂಡ. ರಂಗಭೂಮಿ ಸದಾ ಜೀವಂತವಾದುದು ಎಂದು ಕೆಎಸ್‍ಎಸ್ ಕಾಲೇಜು ಪೂರ್ವ ವಿದ್ಯಾರ್ಥಿ ದಿವಾಕರ ಮುಂಡಾಜೆ ಹೇಳಿದರು.
ಅವರು ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನಲ್ಲಿ  ನಡೆದ ಕುಸುಮಸಾರಂಗ-2019 ಮತ್ತು ಐಕ್ಯೂಎಸಿ ಸಹಯೋಗದಲ್ಲಿ 27ನೇ ವರ್ಷದ ರಂಗ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸಮಾಜದ ಗೌರವಕ್ಕೆ ಪಾತ್ರರಾಗಲು ಪಠ್ಯೇತರ ಚಟುವಟಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಅವರು ಪ್ರಸ್ತಾವನೆಗೈದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸ್ಪೂರ್ತಿಯನ್ನು ತುಂಬಲು ನಾಟಕಕ್ಕೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.
ಕಾಲೇಜು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್ ರೈ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಬಾಲಕೃಷ್ಣ ಪೈ, ಕುಸುಮಸಾರಂಗದ ಸ್ಥಾಪಕ ನಿರ್ದೇಶಕ ತುಕರಾಮ್ ಯೇನೆಕಲ್ಲು, ಪೂರ್ವ ವಿದ್ಯಾರ್ಥಿ ರಾಮಚಂದ್ರ ಮುಖ್ಯ ಅತಿಥಿಗಳಾಗಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ವಿನ್ಯಾಸ್ ಎಚ್ ವಂದಿಸಿದರು. ಲೋಹಿತ್ ಎಂ.ಡಿ ವಂದಿಸಿದರು. ಬಳಿಕ ಕುಸುಮಸಾರಂಗ ವಿದ್ಯಾರ್ಥಿಗಳು ನಟಿಸಿದ ಪ್ರೋ ಜಯಪ್ರಕಾಶ್ ಮಾವಿನಕುಳಿ ರಚಿಸಿದ ಅಭಿಯಾನ ನಾಟಕ ಪ್ರದರ್ಶನಗೊಂಡಿತು. ಉಪನ್ಯಾಸಕರು, ಪೋಷಕರು, ಪೂರ್ವ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?
May 16, 2026
2:33 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ
May 16, 2026
12:47 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror