ಕೇಂದ್ರ ಸರಕಾರ ಪರಿಹಾರ ಘೋಷಿಸಲಿ- ಕೆಪಿಸಿಸಿ ತಂಡ ಆಗ್ರಹ

August 19, 2019
9:55 PM

ಸುಳ್ಯ: ರಾಜ್ಯದಲ್ಲಿ ಕಂಡು ಕೇಳರಿಯದಷ್ಟು ಭೀಕರವಾದ ಪ್ರಳಯದಿಂದ ಜನತೆ ಸಂಪೂರ್ಣ ತತ್ತರಿಸಿ ಹೋಗಿದ್ದರೂ ಕೇಂದ್ರ ಸರಕಾರ ಒಂದು ರೂಪಾಯಿಯವನ್ನೂ ಪರಿಹಾರ ನೀಡದೆ ತೀವ್ರ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ನೇಮಕ ಮಾಡಿದ ಪ್ರಕೃತಿ ವಿಕೋಪ ಅಧ್ಯಯನ ತಂಡ ಹೇಳಿದೆ.

Advertisement
Advertisement

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಬಿ.ರಮಾನಾಥ ರೈ ಮತ್ತು ಯು.ಟಿ.ಖಾದರ್ ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರವಾಹ ಉಂಟಾದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಕ್ಕೆ ಆಗಮಿಸಿ ವೈಮಾನಿಕ ಸಮೀಕ್ಷೆ ನಡೆಸಿ ತಕ್ಷಣ ಎರಡು ಸಾವಿರ ಕೋಟಿ ಪರಿಹಾರ ಘೋಷಣೆ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರವನ್ನೂ ಘೋಷಿಸದೆ, ರಾಜ್ಯಕ್ಕೆ ಭೇಟಿ ನೀಡಿ ಪ್ರಳಯ ಬಾಧಿತ ಪ್ರದೇಶದ ವೀಕ್ಷಣೆಯನ್ನು ಮಾಡದೆ ಕರ್ನಾಟಕದ ಜನತೆಯನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು. ಅಮಿತ್ ಷಾ, ನಿರ್ಮಲಾ ಶೀತಾರಾಮನ್ ರಾಜ್ಯಕ್ಕೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಿದರೂ ಯಾವುದೇ ಪರಿಹಾರ ಘೋಷಣೆ ಮಾಡದೆ ಬರಿಗೈಯಲ್ಲಿ ಹಿಂತಿರುಗಿದ್ದಾರೆ ಎಂದರು.

Advertisement

ಸರ್ವಪಕ್ಷ ಸಭೆ ಕರೆಯಲಿ:ರಾಜ್ಯದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಲಿ ಎಂದು ಯು.ಟಿ.ಖಾದರ್ ಒತ್ತಾಯಿಸಿದರು. ಕೊಡಗಿನಲ್ಲಿ ಪ್ರಕೃತಿ ವಿಕೋಪ ಉಂಟಾದ ಸಂದರ್ಭದಲ್ಲಿ ಸಮ್ಮಿಶ್ರ ಸರಕಾರ ಜನರ ಜೊತೆಯಲ್ಲಿ ನಿಂತು ಕೆಲಸ ಮಾಡಿ ಎಲ್ಲಾ ನೆರವನ್ನೂ ನೀಡಿತ್ತು. ಆದರೆ ಈಗ ಸರಕಾರ ಪ್ರಳಯ ಪರಿಸ್ಥಿತಿಯನ್ನು ಎದುರಿಸುವಲ್ಲಿ ಎಡವಿದೆ ಎಂದು ಟೀಕಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |
May 9, 2024
10:10 PM
by: ಮಹೇಶ್ ಪುಚ್ಚಪ್ಪಾಡಿ
ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ
May 9, 2024
8:27 PM
by: ದ ರೂರಲ್ ಮಿರರ್.ಕಾಂ
Karnataka Weather | 09-05-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ |
May 9, 2024
12:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror