ಕೇಂದ್ರ ಸರಕಾರ ಪರಿಹಾರ ಘೋಷಿಸಲಿ- ಕೆಪಿಸಿಸಿ ತಂಡ ಆಗ್ರಹ

August 19, 2019
9:55 PM

ಸುಳ್ಯ: ರಾಜ್ಯದಲ್ಲಿ ಕಂಡು ಕೇಳರಿಯದಷ್ಟು ಭೀಕರವಾದ ಪ್ರಳಯದಿಂದ ಜನತೆ ಸಂಪೂರ್ಣ ತತ್ತರಿಸಿ ಹೋಗಿದ್ದರೂ ಕೇಂದ್ರ ಸರಕಾರ ಒಂದು ರೂಪಾಯಿಯವನ್ನೂ ಪರಿಹಾರ ನೀಡದೆ ತೀವ್ರ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ನೇಮಕ ಮಾಡಿದ ಪ್ರಕೃತಿ ವಿಕೋಪ ಅಧ್ಯಯನ ತಂಡ ಹೇಳಿದೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಬಿ.ರಮಾನಾಥ ರೈ ಮತ್ತು ಯು.ಟಿ.ಖಾದರ್ ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರವಾಹ ಉಂಟಾದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಕ್ಕೆ ಆಗಮಿಸಿ ವೈಮಾನಿಕ ಸಮೀಕ್ಷೆ ನಡೆಸಿ ತಕ್ಷಣ ಎರಡು ಸಾವಿರ ಕೋಟಿ ಪರಿಹಾರ ಘೋಷಣೆ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರವನ್ನೂ ಘೋಷಿಸದೆ, ರಾಜ್ಯಕ್ಕೆ ಭೇಟಿ ನೀಡಿ ಪ್ರಳಯ ಬಾಧಿತ ಪ್ರದೇಶದ ವೀಕ್ಷಣೆಯನ್ನು ಮಾಡದೆ ಕರ್ನಾಟಕದ ಜನತೆಯನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು. ಅಮಿತ್ ಷಾ, ನಿರ್ಮಲಾ ಶೀತಾರಾಮನ್ ರಾಜ್ಯಕ್ಕೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಿದರೂ ಯಾವುದೇ ಪರಿಹಾರ ಘೋಷಣೆ ಮಾಡದೆ ಬರಿಗೈಯಲ್ಲಿ ಹಿಂತಿರುಗಿದ್ದಾರೆ ಎಂದರು.

ಸರ್ವಪಕ್ಷ ಸಭೆ ಕರೆಯಲಿ:ರಾಜ್ಯದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಲಿ ಎಂದು ಯು.ಟಿ.ಖಾದರ್ ಒತ್ತಾಯಿಸಿದರು. ಕೊಡಗಿನಲ್ಲಿ ಪ್ರಕೃತಿ ವಿಕೋಪ ಉಂಟಾದ ಸಂದರ್ಭದಲ್ಲಿ ಸಮ್ಮಿಶ್ರ ಸರಕಾರ ಜನರ ಜೊತೆಯಲ್ಲಿ ನಿಂತು ಕೆಲಸ ಮಾಡಿ ಎಲ್ಲಾ ನೆರವನ್ನೂ ನೀಡಿತ್ತು. ಆದರೆ ಈಗ ಸರಕಾರ ಪ್ರಳಯ ಪರಿಸ್ಥಿತಿಯನ್ನು ಎದುರಿಸುವಲ್ಲಿ ಎಡವಿದೆ ಎಂದು ಟೀಕಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror