ಕೊಡಗಿನಲ್ಲಿ ಆದ್ರಾ ಮಳೆಯ ಸಡಗರ

July 5, 2019
8:30 AM

ಮಡಿಕೇರಿ  :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ  ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು ಕಾದು ನೋಡಬೇಕಷ್ಟೆ.
ಬೆಳಗ್ಗಿನಿಂದಲೆ ಮಡಿಕೇರಿ ವ್ಯಾಪ್ತಿಯಲ್ಲಿ ದಟ್ಟ ಮಂಜು, ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಮುಂಗಾರು ಚೇತರಿಸಿಕೊಳ್ಳುತ್ತಿರುವ ಸೂಚನೆಯನ್ನು ನೀಡಿದೆ. ಮಧ್ಯಾಹ್ನದ ಬಳಿಕ ನಿರಂತರವಾಗಿ ಸಂಜೆಯವರೆಗೆ ಹದವಾಗಿ ಸುರಿಯುತ್ತಿದ್ದ ಮಳೆ ಮುಂಗಾರಿನ ವಾತಾವರಣಕ್ಕೆ ಕೈಚಾಚಿತು.
ಕಳೆದ ಸಾಲಿನಲ್ಲಿ ಇದೇ ಅವಧಿಗೆ 53.48 ಇಂಚು ಸರಾಸರಿ ಮಳೆ ಜಿಲ್ಲೆಯಲ್ಲಿ ಆಗಿತ್ತಾದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 17.76 ಇಂಚು ಮಳೆಯಾಗಿದ್ದು, ಜಿಲ್ಲೆ ಬರದ ಹೊಸ್ತಿಲಿನಲ್ಲಿ ನಿಂತು ಬಿಟ್ಟಿದೆಯೋ ಎನ್ನುವ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪರಿಸ್ಥಿತಿಯ ನಡುವೆ ಇಂದು ಸುರಿದ ಮಳೆ ಒಂದಷ್ಟು ನೆಮ್ಮದಿಯನ್ನು ಜಿಲ್ಲೆಯ ರೈತಾಪಿ ವರ್ಗದಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದೆ.
ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ, ತಲಕಾವೇರಿ ವಿಭಾಗಗಳಲ್ಲು ಇಲ್ಲಿಯವರೆಗೆ ಅಲ್ಪಸ್ವಲ್ಪ ಮಳೆಯಾಗಿದೆಯೇ ಹೊರತು, ವರ್ಷಂಪ್ರತಿ ಸುರಿಯುವ ಭಾರೀ ಮಳೆ ಕಂಡು ಬಂದಿಲ್ಲ. ಇದೇ ಪರಿಸ್ಥಿತಿ ಜಿಲ್ಲೆಯ ಕಾವೇರಿ ನದಿ ತಟದ ಎಲ್ಲಾ ಪ್ರದೇಶಗಳಲ್ಲು ಕಂಡು ಬಂದಿದೆಯಾದರೆ, ವೀರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಿಲ್ಲೆಯ ಇತರೆ ಭಾಗಗಳಿಗಿಂತ ಒಂದಷ್ಟು ಉತ್ತಮ ಮಳೆಯಾಗಿದೆ.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಸಾಯನಿಕ ರಹಿತ ದಂತಮಂಜನ ‘ದಂತಸುರಭಿ’ ಲೋಕಾರ್ಪಣೆ | ಜನಜೀವನ ವಿಷದಿಂದ ಅಮೃತದತ್ತ ಸಾಗಲಿ: ರಾಘವೇಶ್ವರ ಶ್ರೀ ಆಶಯ
July 24, 2025
6:19 AM
by: The Rural Mirror ಸುದ್ದಿಜಾಲ
ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ | ಉತ್ತರ ಭಾರತದ ಹಲವೆಡೆ ಭಾರಿ ಮಳೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ |
July 23, 2025
10:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-07-2025 | ನಿರಂತರ ಹನಿ ಮಳೆಗೆ ಕಾರಣವೇನು..? | ವಾಯುಭಾರ ಕುಸಿತದ ಪರಿಣಾಮವೂ…ಮಳೆಯ ಆತಂಕವೂ…!
July 23, 2025
3:57 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group