ಕೊಡಗಿನಲ್ಲಿ ಕಡಿಮೆಯಾದ ಮಳೆ : ಸುಳ್ಯದಲ್ಲಿ ಭರ್ಜರಿ ಮಳೆ : ಕೇರಳದ 10 ಜಿಲ್ಲೆಗಳಲ್ಲಿ ರೆಡ್ ಎಲರ್ಟ್

July 22, 2019
7:13 PM

ಮಡಿಕೇರಿ/ಕಾಸರಗೋಡು/ಸುಳ್ಯ : ಕೊಡಗು ಜಿಲ್ಲೆಯಾದ್ಯಂತ ಈಗ ಸಾಧಾರಣ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸುಳ್ಯದಲ್ಲೂ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.  ಸೋಮವಾರ ಬೆಳಗಿನಿಂದಲೇ  ಮಳೆಯಾಗುತ್ತಿದೆ.  ಕೇರಳದಲ್ಲಿ  ಕಾಸರಗೋಡು ಸೇರಿದಂತೆ 10 ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. 

Advertisement
Advertisement

ಮಡಿಕೇರಿಯಲ್ಲಿ  ಮಳೆ ಕಡಿಮೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ನದಿ ನೀರು ರಸ್ತೆಯನ್ನು ಆವರಿಸಲು ಕೆಲವೇ ಅಡಿಗಳಷ್ಟೇ ಬಾಕಿ ಉಳಿದಿದ್ದು, ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೊಡಗು, ಕೇರಳ ಗಡಿಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಪಕ್ಕದ ಭಾಗಮಂಡಲದ ನದಿಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿದೆ.

Advertisement

ಕೊಡಗು ಜಿಲ್ಲೆಯ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆಯಾದರೂ ನಿರಂತರ ಮಳೆ ಸುರಿಯುತ್ತಿರುವುದರಿಂದ ಕೆಲವು ಭಾಗಗಳಲ್ಲಿ ಬರೆ ಕುಸಿದ ಘಟನೆಗಳು ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಲೆತಿರಿಕೆ ಬೆಟ್ಟದಲ್ಲಿರುವ ಎರಡು ಮನೆಗಳ ತಡೆಗೋಡೆಗಳ ಮೇಲೆ ಬರೆ ಕುಸಿದಿದೆ. ಕಳೆದ ವರ್ಷ ಮಹಾಮಳೆಗೆ ಭಾರೀ ಅನಾಹುತಗಳನ್ನು ಎದುರಿಸಿದ್ದ ಜೋಡುಪಾಲದಲ್ಲೂ ಬರೆಗಳು ಕುಸಿದಿದ್ದು ಕಳೆದ ಮಳೆಗಾಲದಲ್ಲಿ ಹಾನಿಗೀಡಾಗಿದ್ದ ಮಡಿಕೇರಿ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬೃಹತ್ ಬರೆ ಕುಸಿಯುತ್ತಲೇ ಇದ್ದು, ಇಂದೂ ಕೂಡ ಮಣ್ಣು ಕುಸಿದು ಬಿದ್ದಿದೆ.

Advertisement

 

ಕೇರಳದಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ :

Advertisement

ಕಾಸರಗೋಡು ಸೇರಿದಂತೆ ಕಣ್ಣೂರು, ವಯನಾಡ್, ಕೋಝಿಕ್ಕೋಡ್, ಇಡುಕ್ಕಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಸೇರಿದಂತೆ 10 ಜಿಲ್ಲೆಗಳಲ್ಲಿ  ರೆಡ್  ಹಾಗೂ ಆರೆಂಜ್ ಎಲರ್ಟ್ ಘೊಷಣೆ ಮಾಡಲಾಗಿದೆ. ಹೀಗಾಗಿ ಕೆಲವು ಜಿಲ್ಲೆಗಳಲ್ಲಿ  ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಳೆದ ಎರಡು ದಿನಗಳಿಂದ ಕೇರಳದ ವಿವಿಧ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುತ್ತಿದೆ.

 

Advertisement

ದಕ್ಷಿಣ ಕನ್ನಡದಲ್ಲೂ ಉತ್ತಮ ಮಳೆ:

Advertisement

ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿದೆಡೆ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ವೆದರ್ ರಿಪೋರ್ಟ್ ಪ್ರಕಾರ ನಾಳೆ ಬೆಳ್ತಂಗಡಿ, ಕಾರ್ಕಳ, ಆಗುಂಬೆ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಡಿಕೇರಿ ಪ್ರದೇಶದಲ್ಲೂ ಹೆಚ್ಚಿನ ಮಳೆಯಾಗಲಿದೆ.

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror