ಕೊಡಗಿನಲ್ಲಿ ಮಳೆ ಚುರುಕು : ಮಡಿಕೇರಿಯಲ್ಲಿ ಮಂಜು, ಚಳಿ

June 13, 2019
9:30 AM

ಮಡಿಕೇರಿ  :ಕೊಡಗಿನಲ್ಲಿ ತಡವಾಗಿ ಆರಂಭಗೊಂಡ ಮಳೆ ಮೂರನೇ ದಿನ ಚುರುಕು ಪಡೆದುಕೊಂಡಿದೆ. ನೈರುತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಜಿಲ್ಲೆಯಲ್ಲಿ ಎರಡನೇ ಅಥವಾ ಮೂರನೇ ವಾರದಲ್ಲಿ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವುದು ಸಾಮಾನ್ಯ.
ಜಿಲ್ಲಾ ಕೇಂದ್ರ ಮಡಿಕೇರಿ ಮಂಜಿನ ನಗರಿಯಾಗಿ ಬದಲಾಗಿದೆ, ಚಳಿಯೂ ಇದೆ. ಮುಂಗಾರು ಮಳೆಗೆ ಪ್ರತಿಯೊಬ್ಬರೂ ಕೊಡೆ, ಸ್ವೆಟರ್, ಗಂಬೂಟು, ಬಟ್ಟೆ ಒಣಗಲು ಬಳಂಜಿ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇನ್ನು ಮುಂದಿನ ನಾಲ್ಕು ತಿಂಗಳ ಕಾಲ ಮೋಡ ಕವಿದ ವಾತಾವರಣವನ್ನು ಕೊಡಗು ಜಿಲ್ಲೆಯಲ್ಲಿ ಕಾಣಬಹುದಾಗಿದೆ.

Advertisement

ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯ ಜನರು ತುಂಬಾ ಸಂಕಷ್ಟ ಅನುಭವಿಸಿದ್ದರು. ಭತ್ತ, ಮುಸುಕಿನ ಜೋಳ, ಕಾಫಿ, ಏಲಕ್ಕಿ, ಕಾಳು ಮೆಣಸು, ಬಾಳೆ ಹೀಗೆ ನಾನಾ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ನಾಶವಾದವು. ಇದರಿಂದಾಗಿ ಜಿಲ್ಲೆಯ ಕೃಷಿಕರು ಚೇತರಿಸಿಕೊಳ್ಳುವುದೇ ಕಷ್ಟಸಾಧ್ಯವಾಗಿತ್ತು. ಸರ್ಕಾರ ಬೆಳೆ ಹಾನಿಗೆ ಪರಿಹಾರ ನೀಡಿದೆ. ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಸದ್ಯದಲ್ಲಿಯೇ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಆದರೂ ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಒಂದು ರೀತಿ ಜಿಲ್ಲೆಯ ಜನರ ಬದುಕು ಅಸ್ತವ್ಯಸ್ತ ಉಂಟಾಗಿತ್ತು.

ಕಳೆದ ನಾಲ್ಕು ವರ್ಷದಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗಿನ ವಾಡಿಕೆ ಮಳೆಯ ಪ್ರಮಾಣ ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗೆ ವಾಡಿಕೆ ಮಳೆಯ ಪ್ರಮಾಣವು 245.50 ಮಿ.ಮೀ.ಗಳಾಗಿದ್ದು, 2016 ರಲ್ಲಿ 158.20 ಮಿ.ಮೀ ಮಳೆಯಾಗಿದ್ದು, 2017 ರಲ್ಲಿ 305.04 ಮಿ.ಮೀ. ಮಳೆಯಾಗಿದ್ದು, 2018 ರ ಇದೇ ಅವಧಿಯಲ್ಲಿ 423.68 ಮಿ.ಮೀ. ಮಳೆಯಾಗಿದ್ದರೆ, 2019ರ ಇದೇ ಅವಧಿಯಲ್ಲಿ 146.92 ಮಿ.ಮೀ ಮಳೆಯಾಗಿರುವುದನ್ನು ಗಮನಿಸಬಹುದಾಗಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ
July 2, 2025
10:57 PM
by: The Rural Mirror ಸುದ್ದಿಜಾಲ
ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ಈಗ ಮತ್ತಷ್ಟು ‘ಸ್ಮಾರ್ಟ್’! | ವಿದ್ಯಾರ್ಥಿಗಳ ಮನಗೆದ್ದ ಆಧುನಿಕ ವ್ಯವಸ್ಥೆಯೊಂದಿಗಿನ ಶಿಕ್ಷಣ
July 2, 2025
2:29 PM
by: The Rural Mirror ಸುದ್ದಿಜಾಲ
ಗೇರು ಕೃಷಿ | ಮಾದರಿ ಗ್ರಾಮವಾಗಿ ಸಂಪಾಜೆ ಆಯ್ಕೆ | ವಿವಿಧ ಚಟುವಟಿಕೆ ಬಗ್ಗೆ ವಿಚಾರವಿನಿಮಯ|
July 1, 2025
11:24 PM
by: The Rural Mirror ಸುದ್ದಿಜಾಲ
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿ ಲೋಕಾರ್ಪಣೆ
July 1, 2025
10:13 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group