ಕೊಡಗು ದುರಂತ: ಸ್ಥಳಾಂತರಕ್ಕೂ ಮುನ್ನ ಪರ್ಯಾಯ ವ್ಯವಸ್ಥೆ ಕಲ್ಪಿಸಿ

May 30, 2019
10:48 AM

ಮಡಿಕೇರಿ: ಕೊಡಗಿನ ಕೆಲವು ಗ್ರಾಮಗಳನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಅಲ್ಲಿನ ನಿವಾಸಿಗಳನ್ನು ಮಳೆಗಾಲಕ್ಕೂ ಮೊದಲು ಸ್ಥಳಾಂತರಗೊಳ್ಳುವಂತೆ ತಿಳಿಸಿರುವ ರಾಜ್ಯ ಸರಕಾರದ ಕ್ರಮ ಖಂಡನೀಯ. ಗ್ರಾಮದಿಂದ ಸ್ಥಳಾಂತರಗೊಳ್ಳುವವರಿಗೆ ಅಗತ್ಯ ವಸತಿ ವ್ಯವಸ್ಥೆ ಅಥವಾ ಮನೆ ಬಾಡಿಗೆಯನ್ನು ಒದಗಿಸಿಕೊಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ನಾಪಂಡ ರವಿ ಕಾಳಪ್ಪ ಒತ್ತಾಯಿಸಿದ್ದಾರೆ.

Advertisement

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು  ಕಳೆದ ವರ್ಷದ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಗ್ರಾಮಸ್ಥರು ಇನ್ನೂ ಕೂಡ ಸುಧಾರಿಸಿಕೊಳ್ಳದ ಸ್ಥಿತಿಯಲ್ಲಿರುವಾಗ ರಾಜ್ಯ ಸರಕಾರ ದಿಢೀರಾಗಿ ಗ್ರಾಮ ಬಿಡುವಂತೆ ತಿಳಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸ್ಥಳಾಂತರಗೊಳ್ಳುವವರು ಅತಂತ್ರ ಸ್ಥಿತಿಯನ್ನು ಅನುಭವಿಸುವುದರಿಂದ ಅವರಿಗೆ ಪರ್ಯಾಯ ವ್ಯವಸ್ಥೆ ಏನು ಎಂಬುವುದನ್ನು ಸ್ಪಷ್ಟಪಡಿಸಿಲ್ಲ. ಸರಕಾರದ ಈ ನಿರ್ಲಕ್ಷ್ಯ ಮನೋಭಾವನೆಯನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಅಲ್ಲದೆ, ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಕೇಂದ್ರ ಸರಕಾರ ಮಳೆಹಾನಿ ಪರಿಹಾರವಾಗಿ ಕೊಡಗು ಜಿಲ್ಲೆಗೆ ಸೀಮಿತವಾಗಿ 546 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ ರಾಜ್ಯ ಸರಕಾರ ಇದನ್ನು ಜಿಲ್ಲೆಗೆ ಸದ್ಬಳಕೆ ಮಾಡದೆ ಇತೆರೆಡೆಗೆ ಹಂಚಿಕೆ ಮಾಡುವ ಮೂಲಕ ದುರಪಯೋಗಪಡಿಸಿದೆ ಎಂದು ಆರೋಪಿಸಿದರು. ಸಂತ್ರಸ್ತ ರೈತರು ಹಾಗೂ ಬೆಳೆಗಾರರ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಮನವಿಮಾಡಿಕೊಳ್ಳಲಾಗುವುದು. ಈ ಬೇಡಿಕೆಗೆ ಎರಡೂ ಸರಕಾರಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಲಿವೆ ಎನ್ನುವ ವಿಶ್ವಾಸವಿದೆ ಎಂದು ರವಿಕಾಳಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿಕುಶಾಲಪ್ಪ, ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ ,  ಪ್ರಧಾನ ಕಾರ್ಯದರ್ಶಿಗಳಾದ ಕಾಂತಿ ಸತೀಶ್ ಹಾಗೂ ವಿ.ಕೆ.ಲೋಕೇಶ್ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ
July 2, 2025
10:57 PM
by: The Rural Mirror ಸುದ್ದಿಜಾಲ
ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ಈಗ ಮತ್ತಷ್ಟು ‘ಸ್ಮಾರ್ಟ್’! | ವಿದ್ಯಾರ್ಥಿಗಳ ಮನಗೆದ್ದ ಆಧುನಿಕ ವ್ಯವಸ್ಥೆಯೊಂದಿಗಿನ ಶಿಕ್ಷಣ
July 2, 2025
2:29 PM
by: The Rural Mirror ಸುದ್ದಿಜಾಲ
ಗೇರು ಕೃಷಿ | ಮಾದರಿ ಗ್ರಾಮವಾಗಿ ಸಂಪಾಜೆ ಆಯ್ಕೆ | ವಿವಿಧ ಚಟುವಟಿಕೆ ಬಗ್ಗೆ ವಿಚಾರವಿನಿಮಯ|
July 1, 2025
11:24 PM
by: The Rural Mirror ಸುದ್ದಿಜಾಲ
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಷ್ಟ್ರೀಯ ಅರಿಶಿಣ ಮಂಡಳಿ ಲೋಕಾರ್ಪಣೆ
July 1, 2025
10:13 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group