ಕೊನೆಗೂ ಅಡ್ಡ ಮತದಾನದ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ : ಪಕ್ಷದ ಜವಾಬ್ದಾರಿಯಿಂದ ಇಬ್ಬರು ಮುಕ್ತ..!

June 30, 2019
7:42 PM

ಸುಳ್ಯ:  ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದ್ದ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಚುನಾವಣೆಯ ಅಡ್ಡಮತದಾನಕ್ಕೆ ಬಿಜೆಪಿ ಕ್ರಮ ಕೈಗೊಳ್ಳಲು ಆರಂಭಿಸಿದೆ. ಚುನಾವಣೆಯಲ್ಲಿ ಮತದಾನದ ಪ್ರತಿನಿಧಿಗಳಾಗಿದ್ದ ಗಂಗಾಧರ ರೈ ಪುಡ್ಕಜೆ ಮತ್ತು ರಾಮಕೃಷ್ಣ ರೈ ಮಾಲೆಂಗ್ರಿಯವರನ್ನು ಪಕ್ಷದ ಜವಾಬ್ದಾರಿಯಿಂದ ಮುಕ್ತಗೊಳಿಸುವ ಮೂಲಕ ಇದೇ ಪ್ರಥಮವಾಗಿ ಅಡ್ಡಮತದಾನಕ್ಕೆ ಕ್ರ‌ಮ ಜರುಗಿಸಿದ್ದಾರೆ.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಚುನಾವಣೆಯಲ್ಲಿ ಏಳು ಮಂದಿ ಅಡ್ಡಮತದಾನ ಮಾಡಿದ ಕಾರಣ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗೆ ಸೋಲಾಗಿತ್ತು‌.
ಅಡ್ಡಮತದಾನ ಮಾಡಿದವರನ್ನು ಪತ್ತೆ ಮಾಡಲು ಸಾಧ್ಯವಾಗದ ಹಿನ್ನಲೆಯಲ್ಲಿ ಚುನಾವಣಾ ಪ್ರತಿನಿಧಿಗಳಾಗಿದ್ದ ಎಲ್ಲರೂ ಜೂ.25ರೊಳಗೆ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಸಂಘ ಪರಿವಾರದ ಕಡೆಯಿಂದ ಸೂಚನೆ ನೀಡಲಾಗಿತ್ತು. ಜೂನ್.30ರ ಬಳಿಕ ಪಕ್ಷದ ಕೋರ್ ಕಮಿಟಿ ಸಭೆ ಸೇರಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಘೋಷಿಸಿತು. ಈ ಹಿನ್ನಲೆಯಲ್ಲಿ ಕ್ರಮ ಜರುಗಿಸಲು ಆರಂಭಿಸಿದೆ.

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ ರೈ ಪುಡ್ಕಜೆ ಮತ್ತು ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಮಾಲೆಂಗ್ರಿಯವರನ್ನು ಕಾರಣನಿಮಿತ್ತ ಪಕ್ಷದ ಎಲ್ಲಾ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮತ್ತು ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಈ ಅಂಶವನ್ನು ಗಮನದಲ್ಲಿರಿಸಿಕೊಳ್ಳಬೇಕಾಗಿ ಈ ಮೂಲಕ ಕೋರಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಹೇಳಿಕೆಯಲ್ಲಿ ಅಡ್ಡಮತದಾನದ ಕುರಿತು ಪ್ರಸ್ತಾಪವಾಗಿಲ್ಲ. ಆದರೆ ಅಡ್ಡಮತದಾನಕ್ಕೆ ಸಂಬಂಧಪಟ್ಟು ಕ್ರ‌ಮ ಕೈಗೊಳ್ಳಲಾಗಿದೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಸೂಚನೆಯ ಮೇರೆಗೆ 5 ಮಂದಿ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಉಳಿದವರು ಒಂದೆರಡು ದಿನದಲ್ಲಿ ರಾಜಿನಾಮೆ ಸಲ್ಲಿಸುವ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಕ್ರಮ ಮುಂದುವರಿಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ‌.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror