#ಕೊರೊನಾ ಔಟ್ಬ್ರೇಕ್ | ಕೊರೊನಾ ವೈರಸ್ ಸೋಂಕಾದವರಿಗೆ ಭಯ ಬೇಡ | ನಡೆಯುತ್ತಿದೆ ಆನ್ ಲೈನ್ ಕೌನ್ಸಿಲಿಂಗ್ | ಸಕ್ರಿಯವಾಗಿ ತೊಡಗಿಸಿಕೊಂಡ ಸುಳ್ಯದ ಅಕ್ಷರ ದಾಮ್ಲೆ |

March 30, 2020
1:43 PM

ಸುಳ್ಯ: ಕೊರೊನಾ ವೈರಸ್ ಸೋಂಕಾದ ವ್ಯಕ್ತಿಗಳು ಹಾಗೂ ಕ್ವಾಂರೇಂಟೈನ್ ನಲ್ಲಿರುವ ಮಂದಿ ಹಾಗೂ ಅವರ ಕುಟುಂಬದ ಮಂದಿ ಸಹಜವಾಗಿಯೇ ಮಾನಸಿಕವಾಗಿ ನೊಂದಿರುತ್ತಾರೆ. ಇಂತಹವರಿಗೆ ಆನ್ ಲೈನ್ ಮೂಲಕ ನೆರವಾಗಲು, ಆಪ್ತಸಮಾಲೋಚನೆ ಮಾಡಲು ತಂಡ ಸಿದ್ಧವಾಗಿದೆ. ಬೆಂಗಳೂರಿನಲ್ಲಿ  ಸೋಚರ ಸಂಸ್ಥೆಯ ಮೂಲಕ ರಚನೆಯಾಗಿರುವ ಕೌನ್ಸಿಲಿಂಗ್   ತಂಡವನ್ನು ಸುಳ್ಯದ ಅಕ್ಷರ ದಾಮ್ಲೆ ನಿರ್ವಹಿಸುತ್ತಿದ್ದು, ಸೋಚರ ಸಂಸ್ಥೆ ವ್ಯವಸ್ಥೆ ಮಾಡುತ್ತಿದೆ. ಎಲ್ಲಾ ವೈದ್ಯರು, ಆಪ್ತ ಸಮಾಲೋಚಕರು ಉಚಿತವಾಗಿ ಈಗ ಬಿಡುವು ಮಾಡಿಕೊಂಡು ಸಾರ್ವಜನಿಕ ಸೇವೆ ನಡೆಸುತ್ತಿದ್ದಾರೆ.

Advertisement
Advertisement

ಸೋಚರ ಎಂಬ ಸಂಸ್ಥೆ ಸುಮಾರು 30 ವರ್ಷಗಳಿಂದ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಕೆಲಸ ಮಾಡುತ್ತಿದೆ. ಇದೀಗ ಈ ಸಂಸ್ತೆ ಸಾರ್ವಜನಿಕ ಕಾಳಜಿಯಿಂದ ಕೊರೊನಾ ಭಯ ನಿವಾರಣೆ ಮಾಡಲು ಹಾಗೂ ಈ ವೈರಸ್ ಸೋಂಕಾಗಿರುವ ವ್ಯಕ್ತಿಗಳ, ಕುಟುಂಬದೊಂದಿಗೆ ಆಪ್ತ ಸಮನಾಲೋಚನೆ ನಡೆಸಿ ಧೈರ್ಯ ತುಂಬುವ ಕಾರ್ಯವನ್ನು ಅನ್ ಲೈನ್ ಮೂಲಕ ಮಾಡುತ್ತಿದೆ. ಇದಕ್ಕೆ ಸುಳ್ಯದ ಅಕ್ಷರ ದಾಮ್ಲೆ ಅವರನ್ನು  ಸಂಪರ್ಕಿಸಿ ಅವರ ನೇತೃತ್ವದಲ್ಲಿ  ಇದೀಗ ಸಮಾಲೋಚನಾ ಚಟುವಟಿಕೆ ಆರಂಭಿಸಲಾಗಿದೆ.

ಇದೀಗ 3 ವಿಭಾಗದಲ್ಲಿ  ಕೆಲಸ ಮಾಡಲಾಗುತ್ತದೆ, ಕೋವಿಡ್-19 ಸೋಂಕಿಗೆ ಒಳಗಾದವರು , ಕೋವಿಡ್-19 ಕ್ವಾರಂಟೇನ್ ನಲ್ಲಿ ಇರುವವರು ಹಾಗೂ ಕುಟುಂಬದ ಸದಸ್ಯರಿಗೆ ಹಾಗೂ ಪ್ರತ್ಯೇಕವಾಗಿ ಹೀಗೆ 3 ವಿಭಾಗದಲ್ಲಿ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ.

ಯಾವುದೇ ರೀತಿಯ ಸಹಾಯ ಬೇಕಿದ್ದರೆ, ಮಾಹಿತಿ ಬೇಕಿದ್ದರೆ ಈ ಕೆಳಗಿನ ಸಂಪರ್ಕದ ಸಂಖ್ಯೆಗೆ ಕರೆ ಮಾಡಬಹುದು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror